ಸಂಗ್ರಹ ಚಿತ್ರ 
ದೇಶ

ಮತ್ತೆ ಇಬ್ಬರು ಪಾಕ್ ಪ್ರಜೆಗಳಿಗೆ ವೈದ್ಯಕೀಯ ವೀಸಾ ನೀಡಿದ ಸುಷ್ಮಾ ಸ್ವರಾಜ್

ವೈದ್ಯಕೀಯ ಕಾರಣಕ್ಕಾಗಿ ಪಾಕಿಸ್ತಾನ ಪ್ರಜೆಗಳಿಗೆ ಭಾರತ ನೀಡುತ್ತಿರುವ ವೀಸಾ ವ್ಯವಸ್ಥೆ ಮುಂದುವರೆದಿದ್ದು, ಇದೀಗ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮತ್ತೆ ಇಬ್ಬರು ಪಾಕ್ ಪ್ರಜೆಗಳಿಗೆ ವೈದ್ಯಕೀಯ ವೀಸಾ ಮಂಜೂರು ಮಾಡಿದ್ದಾರೆ.

ನವದೆಹಲಿ: ವೈದ್ಯಕೀಯ ಕಾರಣಕ್ಕಾಗಿ ಪಾಕಿಸ್ತಾನ ಪ್ರಜೆಗಳಿಗೆ ಭಾರತ ನೀಡುತ್ತಿರುವ ವೀಸಾ ವ್ಯವಸ್ಥೆ ಮುಂದುವರೆದಿದ್ದು, ಇದೀಗ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮತ್ತೆ ಇಬ್ಬರು ಪಾಕ್ ಪ್ರಜೆಗಳಿಗೆ ವೈದ್ಯಕೀಯ ವೀಸಾ ಮಂಜೂರು ಮಾಡಿದ್ದಾರೆ.
ಈ ಸ್ವತಃ ಸುಷ್ಮಾ ಸ್ವರಾಜ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ಪುಟ್ಟ ಮಗಳ ಹೃದಯ ಶಸ್ತ್ರಚಿಕಿತ್ಸೆಗಾಗಿ ಮನವಿ ಮಾಡಿದ್ದ ಪಾಕಿಸ್ತಾನದ ಮಹಿಳೆಯೊಬ್ಬರಿಗೆ ಸುಷ್ಮಾ ಸ್ವರಾಜ್ ನೆರವಾಗಿದ್ದಾರೆ. ಆ ಮೂಲಕ  ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮಲ್ಲಿ ಸಹಾಯ ಯಾಚಿಸಿದ ಇಬ್ಬರು ಪಾಕಿಸ್ತಾನಿ ನಾಗರಿಕರಿಗೆ ಆಪತ್ಬಾಂಧವರಾಗಿದ್ದಾರೆ. ಪಾಕ್ ಪ್ರಜೆಗಳು ಮನವಿ ಮಾಡಿದ ಕೆಲವೇ ಗಂಟೆಗಳಲ್ಲಿ ಅದಕ್ಕೆ ಸ್ಪಂದಿಸಿರುವ ಸುಷ್ಮಾ ಸ್ವರಾಜ್  ಅವರು ವೈದ್ಯಕೀಯ ಕಾರಣಗಳಿಗಾಗಿ ವೀಸಾ ನೀಡುವುದಾಗಿ ಭರವಸೆ ನೀಡಿದ್ದಾರೆ.

‘‘ನಿಮ್ಮ ಮೂರು ವರ್ಷದ ಮಗಳ ತೆರೆದ ಹೃದಯ ಶಸ್ತ್ರಚಿಕಿತ್ಸೆಗಾಗಿ ವೀಸಾ ನೀಡುತ್ತೇವೆ. ಆಕೆ ಶೀಘ್ರ ಗುಣಮುಖಳಾಗಲಿ ಎಂದು ನಾವು ಪ್ರಾರ್ಥಿಸುತ್ತೇವೆ’’ ಎಂದು ಲಾಹೋರ್ ನಿವಾಸಿ ಉಜೈರ್ ಹುಮಾಯುನ್ ಅವರಿಗೆ ಸುಷ್ಮಾ  ಟ್ವೀಟ್ ಮಾಡಿದ್ದಾರೆ. ಹೃದ್ರೋಗಿಯಾಗಿರುವ ತನ್ನ ಪುತ್ರಿಯ ಚಿಕಿತ್ಸೆಗೆ ಭಾರತಕ್ಕೆ ಬರಲು ಹುಮಾಯುನ್ ಸಚಿವೆ ಸುಷ್ಮಾ ಸ್ವರಾಜ್ ಅವರ ನೆರವು ಕೋರಿದ್ದರು.
ಇದಾದ ಕೆಲವೇ ನಿಮಿಷಗಳಲ್ಲಿ ಸುಷ್ಮಾ ಅವರು ಪಾಕಿಸ್ತಾನಿ ಮಹಿಳೆ ನೂರ್ಮಾ ಹಬೀಬ್ ಗೆ ಆಕೆಯ ತಂದೆಯ ಲಿವರ್ ಕಸಿಗಾಗಿ ಭಾರತಕ್ಕೆ ಬರಲು ವೀಸಾ ನೀಡುವ ಭರವಸೆ ನೀಡಿದ್ದಾರೆ. ‘‘ನಿಮ್ಮ ತಂದೆಯ ಶಸ್ತ್ರಕ್ರಿಯೆ  ಯಶಸ್ವಿಯಾಗಿ ಅವರು ದೀರ್ಘಕಾಲ ಬಾಳಲಿ’’ ಎಂದು ನೂರ್ಮಾಗೆ ಮಾಡಿದ ಟ್ವೀಟ್ ನಲ್ಲಿ ಸಚಿವೆ ಹೇಳಿದ್ದಾರೆ.  ತಮ್ಮ ತಂದೆ ದೀರ್ಘಕಾಲದ ಲಿವರ್ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದು, ಇದೀಗ ಅವರ ಸ್ಥಿತಿ  ಚಿಂತಾಜನಕವಾಗಿದೆ. ದಯಮಾಡಿ ನೆರವು ನೀಡಿ ಎಂದು ನೂರ್ಮಾ ಹಬೀಬ್ ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel