ಅರುಣ್ ಜೇಟ್ಲಿ 
ದೇಶ

ಅರ್ಹತೆ ಹಾಗೂ ಸಾಮರ್ಥ್ಯದ ಆಧಾರದಲ್ಲಿ ಕಾಂಗ್ರೆಸ್ ನಾಯಕರನ್ನು ಆಯ್ಕೆ ಮಾಡಲಿ: ಜೇಟ್ಲಿ

ಕಾಂಗ್ರೆಸ್ ಪಕ್ಷ ಅರ್ಹತೆ ಹಾಗೂ ಸಾಮರ್ಥ್ಯದ ಆಧಾರದಲ್ಲಿ ನಾಯಕರನ್ನು ಆಯ್ಕೆ ಮಾಡಬೇಕಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ.

ವಾಷಿಂಗ್ ಟನ್: ಕಾಂಗ್ರೆಸ್ ಪಕ್ಷ ಅರ್ಹತೆ ಹಾಗೂ ಸಾಮರ್ಥ್ಯದ ಆಧಾರದಲ್ಲಿ ನಾಯಕರನ್ನು ಆಯ್ಕೆ ಮಾಡಬೇಕಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ. 
ಅರ್ಹತೆ, ಸಾಮರ್ಥ್ಯವುಳ್ಳ ನಾಯಕರನ್ನು ಆಯ್ಕೆ ಮಾಡುವವರೆಗೆ ಕಾಂಗ್ರೆಸ್ ಬೆಳವಣಿಗೆ ಸಾಧ್ಯವಿಲ್ಲ ಎಂದು ಜೇಟ್ಲಿ ಹೇಳಿದ್ದಾರೆ. ರಾಹುಲ್ ಗಾಂಧಿ ಅಮೆರಿಕಾದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಒಂದು ತಿಂಗಳ ಅವಧಿಯಲ್ಲಿ ಬರ್ಕ್ಲಿ ಇಂಡಿಯಾ  ಕಾನ್ಫರೆನ್ಸ್ ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಅರುಣ್ ಜೇಟ್ಲಿ, ರಾಹುಲ್ ಗಾಂಧಿ ಅವರ ವಂಶಪಾರಂಪರ್ಯ ರಾಜಕಾರಣದ ಹೇಳಿಕೆಯ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದು, ಕಾಂಗ್ರೆಸ್ ಅರ್ಹತೆ ಹಾಗೂ ಸಾಮರ್ಥ್ಯದ ಆಧಾರದಲ್ಲಿ ನಾಯಕತ್ವವನ್ನು ಆಯ್ಕೆ ಮಾಡಬೇಕಿದೆ. ತಮ್ಮ ಪಕ್ಷದಲ್ಲಿ ವಂಶಪಾರಂಪರ್ಯ ಹಿನ್ನೆಲೆಯುಳ್ಳವರು ಇಲ್ಲ ಎಂದು ಹೇಳಿದ್ದಾರೆ. 
ಅರುಣ್ ಜೇಟ್ಲಿ ಅಮೆರಿಕಾಗೆ ಭೇಟಿ ನೀಡಲಿರುವ ಕಾರ್ಯಕ್ರಮ ನಿಗದಿಯಾಗಿದ್ದು, ಅಮೆರಿಕ ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT