ಮುಂಬೈ: ವಾರ್ಷಿಕ ಹಜ್ ಯಾತ್ರೆಗೆ ತೆರಳುವ ಮುಸ್ಲಿಮರಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಸಹಾಯಧನ ಶೀಘ್ರವೇ ರದ್ದಾಗಲಿದೆ! ಹಜ್ ಯಾತ್ರೆಗೆ ಸಂಬಂಧಿಸಿದ ಕರಡು ನೀತಿ ಸಿದ್ಧವಾಗಿದ್ದು, ಯಾತ್ರಿಕರಿಗೆ ನೀಡುವ ಸಹಾಯಧವನ್ನು ನಿಲ್ಲಿಸುವ ಪ್ರಸ್ತಾಪವನ್ನುಿದು ಒಳಗೊಂಡಿದೆ.
ಕೇಂದ್ರದ ಮಾಜಿ ಕಾರ್ಯದರ್ಶಿ ಅಫ್ಜಲ್ ಅಮಾನುಲ್ಲಾ ನೇತೃತ್ವದ ಸಮಿತಿ ಈ ಕರಡು ನೀತಿಯನ್ನು ರಚಿಸಿದ್ದು 2018 -22ರಲ್ಲಿ ಕರಡನ್ನು ಕೇಂದ್ರ ಸಚಿವ ಮುಖಾ¤ರ್ ಅಬ್ಟಾಸ್ ನಖ್ವೀ ಅವರಿಗೆ ಸಲ್ಲಿಸಲಾಗಿದೆ. ಹಜ್ ಸಬ್ಸಿಡಿ ರದ್ದು, 45 ವರ್ಷ ಮೇಲ್ಪಟ್ಟ ಮಹಿಳೆಯರು ಕನಿಷ್ಠ 4 ಮಂದಿಯಿರುವ ತಂಡದೊಂದಿಗೆ ಯಾತ್ರೆ ಕೈಗೊಳ್ಳುವ ಅವಕಾಶ ದಂತಹಾ ಶಿಫಾರಸ್ ಗಳನ್ನು ಈ ನೂತನ ಕರಡು ಒಳಗೊಂಡಿದೆ. ಮುಂದಿನ ವರ್ಷದ ಹಜ್ ಯಾತ್ರೆಗೆ ಈ ಹೊಸ ಕರಡು ನೀತಿ ಅನ್ವಯವಾಗಲಿದೆ.
"ಇದೊಂದು ಪಾರದರ್ಶಕ, ಜನಸ್ನೇಹಿ ನೀತಿಯಾಗಿದೆ. ಇದು ಯಾತ್ರಿಕರ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದ ರೂಪಿಸಿದ ನೀತಿಯಾಗಿದೆ" ಎಂದು ಕೇಂದ್ರ ಸಚಿವ ನಖ್ವಿ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನ ಆದೃಶದಂತೆ ಈ ಸಮಿತಿ ರಚನೆಯಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ತಿಳಿಸಿದೆ
2012ರಲ್ಲಿ ಸುಪ್ರೀಂ ಕೋರ್ಟ್ ಹಜ್ ಯಾತ್ರಿಗಳ ಸಬ್ಸಿಡಿಯನ್ನು ಸ್ವಲ್ಪ ಪ್ರಮಾಣದಲ್ಲೇ ಳಿಸುತ್ತಾ, 2022ರೊಳಗೆ ಸಂಪೂರ್ಣವಾಗಿ ರದ್ದು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು
ಕರಡು ನೀತಿಯಲ್ಲಿನ ಮುಖ್ಯ ಶಿಪಾರಸ್ಸುಗಳು ಹೀಗಿವೆ-
- ಹಜ್ ಸಬ್ಸಿಡಿ ರದ್ದು.
- 45 ವರ್ಷ ಮೇಲ್ಪಟ್ಟ ಮಹಿಳೆಯರು ಕನಿಷ್ಠ ನಾಲ್ವರ ತಂಡದೊಂದಿಗೆ ಯಾತ್ರೆ ಕೈಗೊಳ್ಳಬಹುದು.
- 45 ವರ್ಷ ಕ್ಕೆ ಕಡಿಮೆ ವಯಸ್ಸಿನವರು ತಮ್ಮ ಕುಟುಂಬ ವರ್ಗದೊಡನೆ ಯಾತ್ರೆ ಮಾಡಬೇಕು.
- ನಿಗದಿತ ವಿಮಾನ ನಿಲ್ದಾಣಗಳನ್ನು 21ರಿಂದ 9ಕ್ಕೆ ಇಳಿಸುವುದು.
- ಸಬ್ಸಿಡಿ ರದ್ದಿನಿಂದ ಉಳಿದ ಹಣವನ್ನು ಮುಸ್ಲಿಮರ ಶೈಕ್ಷಣಿಕ ಸಬಲೀಕರಣಕ್ಕೆ ಬಳಸಿಕೊಳ್ಳುಉವುದು.
- ಮುಂದಿನ 5 ವರ್ಷಗಳ ಕಾಲ ಹಜ್ ಕಮಿಟಿ ಮತ್ತು ಖಾಸಗಿ ಸಂಸ್ಥೆಗಳ ಹಜ್ ಕೋಟಾ 70:30ರ ಅನುಪಾತದಲ್ಲಿ ಹಂಚಿಕೆ.
- ಪ್ರಯಣದ ವೆಚ್ಚ ತಗ್ಗಿಸುವ ಸಲುವಾಗಿ ಯಾತ್ರಿಗಳನ್ನು ಹಡಗಿನಲ್ಲಿ ಕಳಿಸುವ ಕುರಿತು ಸೌದಿ ಸರ್ಕಾರದೊಡನೆ ಮಾತುಕತೆ