ಎಎಂಯು ಮತ್ತು ಬಿಹೆಚ್'ಯು 
ದೇಶ

ಎಎಂಯು, ಬಿಹೆಚ್'ಯು ಹೆಸರಿನಲ್ಲಿರುವ ಮುಸ್ಲಿಂ, ಹಿಂದೂ ಪದಗಳನ್ನು ಕೈಬಿಡಿ: ಯುಜಿಸಿ ಶಿಫಾರಸು

ಶಿಕ್ಷಣ ಸಂಸ್ಥೆಗಳು ಧರ್ಮವನ್ನು ಪ್ರತಿಬಿಂಬಿಸಬಾರದು ಎಂಬ ಉದ್ದೇಶದಿಂದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಹೆಸರಿನಲ್ಲಿರುವ ಮುಸ್ಲಿಂ ಪದವನ್ನು ಹಾಗೂ ಬನಾರ್ ಹಿಂದೂ ವಿಶ್ವವಿದ್ಯಾಲಯದ ಹೆಸರಿನಲ್ಲಿರುವ ಹಿಂದೂ ಪದವನ್ನು ಕೈಬಿಡಬೇಕೆಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗ...

ನವದೆಹಲಿ: ಶಿಕ್ಷಣ ಸಂಸ್ಥೆಗಳು ಧರ್ಮವನ್ನು ಪ್ರತಿಬಿಂಬಿಸಬಾರದು ಎಂಬ ಉದ್ದೇಶದಿಂದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಹೆಸರಿನಲ್ಲಿರುವ ಮುಸ್ಲಿಂ ಪದವನ್ನು ಹಾಗೂ ಬನಾರ್ ಹಿಂದೂ ವಿಶ್ವವಿದ್ಯಾಲಯದ ಹೆಸರಿನಲ್ಲಿರುವ ಹಿಂದೂ ಪದವನ್ನು ಕೈಬಿಡಬೇಕೆಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. 
ಕೇಂದ್ರ ವಿಶ್ವವಿದ್ಯಾಲಯಗಳಲ್ಲಿನ ಅಕ್ರಮಗಳ ಬಗೆಗಿನ ದೂರುಗಳನ್ನು ಅವಲೋಕಿಸಲು ಕಳೆದ ಏಪ್ರಿಲ್ 25ರಂದು ಯುಜಿಸಿಯಿಂದ ನೇಮಕಗೊಂಡಿದ್ದ 5 ಸಮಿತಿಗಳಲ್ಲಿ ಒಂದಾಗಿರುವ ಈ ಸಮಿಯು ಈ ಶಿಫಾರಸನ್ನು ಮಾಡಿದೆ. 
ಕೇಂದ್ರ ವಿಶ್ವವಿದ್ಯಾಲಯಗಳಲ್ಲಿನ ಮೂಲ ಸೌಕರ್ಯ, ಶೈಕ್ಷಣಿಕ ಗುಣಮಟ್ಟ, ಸಂಶೋಧನೆ ಮತ್ತು ಹಣಕಾಸು ನಿರ್ವಹಣೆಗಳ ಕುರಿತಾಗಿ ಅಧ್ಯಯನ ನಡೆಸಿ ಅಲ್ಲಿನ ಲೋಪದೋಷಗಳ ಬಗ್ಗೆ ವರದಿ ಸಲ್ಲಿಸುವುದಕ್ಕಾಗಿ ನೇಮಿಸಲ್ಪಟ್ಟ ಈ ಸಮಿತಿಯು, ಶಿಕ್ಷಣ ಸಂಸ್ಥೆಗಳು ಧರ್ಮವನ್ನು ಪ್ರತಿಬಿಂಬಿಸಬಾರದು ಎಂದು ಹೇಳಿದ್ದು, ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಹೆಸರಿನಲ್ಲಿರುವ ಮುಸ್ಲಿಂ ಪದವನ್ನು ಮತ್ತು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಹೆಸರಿನಲ್ಲಿರುವ ಹಿಂದು ಪದವನ್ನು ಕೈಬಿಡಬೇಕೆಂದು ಶಿಫಾರಸು ಮಾಡಿದೆ. ಅಲ್ಲದೆ, ಎಎಂಯು'ವನ್ನು ಅಲಿಘಡ ವಿಶ್ವವಿದ್ಯಾಲಯದವೆಂದು ಹಾಗೂ ಬಿಹೆಚ್'ಯುವನ್ನು ಬನಾರಸ್ ವಿಶ್ವವಿದ್ಯಾಲಯವೆಂದೂ ಪುನರ್ ನಾಮಕರಣ ಮಾಡಬಹುದು ಎಂಬ ಸಲಹೆಯನ್ನು ಸಮಿತಿ ನೀಡಿದೆ. 
ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದವರು ಸರ್ ಸಯ್ಯದ್ ಅಹ್ಮದ್ ಖಾನ್, ಹಿಂದೂ ಬನಾರಸ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದವರು ಮದನ ಮೋಹನ್ ಮಾಳವೀಯ ಅವರು, ಈ ಎರಡೂ ವಿಶ್ವವಿದ್ಯಾಲಯಗಳು ಕೇಂದ್ರ ಸರ್ಕಾರದಿಂದ ಒದಗುವ ಹಣದಿಂದ ನಡೆಯುತ್ತಿರುವುದರಿಂದ ಅವುಗಳು ಧರ್ಮಗಳನ್ನು ಪ್ರತಿನಿಧಿಸುವ ಸಂಸ್ಥೆಗಳಾಗಿರಬಾರದು ಎಂದು ಸಮಿತಿ ಶಿಫಾರಸು ಮಾಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT