ಸುಪ್ರೀಂ ಕೋರ್ಟ್ 
ದೇಶ

ಅರ್ಜಿ ಸಲ್ಲಿಕೆ ವಿಳಂಬದ ಕಾರಣ ವಿಮಾ ಪರಿಹಾರ ತಿರಸ್ಕರಿಸುವಂತಿಲ್ಲ: ಸುಪ್ರೀಂ ಕೋರ್ಟ್

ವಿಮಾ ಪರಿಹಾರಕ್ಕಾಗಿ ಗ್ರಾಹಕರು ಅರ್ಜಿ ಸಲ್ಲಿಸುವುದು ವಿಳಂಬವಾಗಿದೆ ಎಂದ ಮಾತ್ರಕ್ಕೆ ಅವರಿಗೆ ಪರಿಹಾರ ನೀಡದೆ ತಿರಸ್ಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ.

ನವದೆಹಲಿ: ವಿಮಾ ಪರಿಹಾರಕ್ಕಾಗಿ ಗ್ರಾಹಕರು ಅರ್ಜಿ ಸಲ್ಲಿಸುವುದು ವಿಳಂಬವಾಗಿದೆ ಎಂದ ಮಾತ್ರಕ್ಕೆ ಅವರಿಗೆ ಪರಿಹಾರ ನೀಡದೆ ತಿರಸ್ಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ.
ವಿಮಾ ಗ್ರಾಹಕರೊಬ್ಬರ ಮೊಕದ್ದಮೆ ಆಲಿಸಿದ ನ್ಯಾಯಾಲಯ  ವಿಮೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವಾಗ ವಿಳಂಬವಾದರೆ ಮತ್ತು ಹಾಗೆ ವಿಳಂಬವಾಗಲು ಸಮಾಧಾನಕರ ಕಾರಣಗಳಿದ್ದಲ್ಲಿ ಅಂತಹಾ ಗ್ರಾಹಕರಿಗೆ ಪರಿಹಾರ ಪರಿಹಾರ ನೀಡದೇ ಇರುವಂತಿಲ್ಲ ಎಂದು ಆದೇಶಿಸಿದೆ.
ನ್ಯಾಯಮುರ್ತಿಗಳಾದ ಆರ್​ ಕೆ ಅಗರ್ವಾಲ್​ ಮತ್ತು ಎಸ್​ ಅಬ್ದುಲ್​ ನಜೀರ ಅವರುಗಳಿದ್ದ ನ್ಯಾಯ ಪೀಠವು ಈ ಆದೇಶ ನೀಡಿದ್ದು, ತಾಂತ್ರಿಕ ಕಾರಣಗಳಿಗೆ ವಿಮಾ ಪರಿಹಾರ ನೀದದಿರುವಿಕೆಯು ಜನರಲ್ಲಿ ವಿಮೆಯ ಕುರಿತು ವಿಶ್ವಾಸ ಕಳೆದುಕೊಳ್ಳುವಂತೆ ಮಾಡುತ್ತದೆ ಎಂದಿದೆ.
ರಾಷ್ಟ್ರೀಯ ಗ್ರಾಹಕರ ವಿವಾದ ಪರಿಹಾರ ನಿಯೋಗ(ಎನ್ ಸಿಡಿಆರ್ ಸಿ)ಕ್ಕೆ ವಿಚಾರಣೆಗೆ ಬಂದಿದ್ದ ಪ್ರಕರಣವೊಂದರಲ್ಲಿ ಗ್ರಾಹಕರ ಪರವಾಗಿ ತೀರ್ಪು ಪ್ರಕಟಿಸಿದೆ. 
ಪ್ರಸಕ್ತ ಪ್ರಕರಣಕ್ಕೆ ಸಂಬಂಧಿಸಿ ರಿಲಾಯನ್ಸ್​ ಜನರಲ್ ಇನ್ಸುರೆನ್ಸ್​​ ಸಂಸ್ಥೆಗೆ ಟ್ರಕ್​ ಕಳ್ಳತನದ ಪ್ರಕರಣದಲ್ಲಿ ಗ್ರಾಹಕರಿಗೆ 8.35 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್