ಸಂಗ್ರಹ ಚಿತ್ರ 
ದೇಶ

ಉಪವಾಸ ಮಾಡಲಿಲ್ಲವೆಂದು ಪತ್ನಿಗೆ ಇರಿದು, ತಾನು ಆತ್ಮಹತ್ಯೆಗೆ ಶರಣಾದ ಪತಿ

ಹೆಂಗಳೆಯರ ಹಬ್ಬವೆಂದೇ ಪ್ರಸಿದ್ಧಿ ಪಡೆದ ಕರ್ವಾ ಚೌತ್ ಪ್ರಯುಕ್ತ ಪತ್ನಿ ಉಪವಾಸ ಮಾಡಿಲಿಲ್ಲ ಎಂಬ ಕೋಪಕ್ಕೆ ಪತಿರಾಯ ಆಕೆಗೆ ಚೂರಿಯಿಂದ ಇರಿದು ತಾನು...

ನವದೆಹಲಿ: ಹೆಂಗಳೆಯರ ಹಬ್ಬವೆಂದೇ ಪ್ರಸಿದ್ಧಿ ಪಡೆದ ಕರ್ವಾ ಚೌತ್ ಪ್ರಯುಕ್ತ ಪತ್ನಿ ಉಪವಾಸ ಮಾಡಿಲಿಲ್ಲ ಎಂಬ ಕೋಪಕ್ಕೆ ಪತಿರಾಯ ಆಕೆಗೆ ಚೂರಿಯಿಂದ ಇರಿದು ತಾನು ಅಪಾರ್ಟ್ ಮೆಂಟ್ ನಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 
ಉತ್ತರ ದೆಹಲಿಯ ರೋಹಿನಿಯಲ್ಲಿ ಈ ಘಟನೆ ನಡೆದಿದ್ದು ಪತಿಯಿಂದ ಚೂರಿ ಇರಿತಕ್ಕೆ ಒಳಗಾದ ಪತ್ನಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕಟ್ಟಡದಿಂದ ಹಾರಿದ್ದ ಜಸ್ವೀಂದರ್ ಸಿಂಗ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 
ದಂಪತಿಗೆ ನಾಲ್ಕು ವರ್ಷದ ಮಗಳಿದ್ದು ಅನಿವಾರ್ಯ ಕಾರಣದಿಂದ ದಂಪತಿಗಳು ದೂರವಿದ್ದು ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಅಣತಿಯಂತೆ ವಾರಾಂತ್ಯದಲ್ಲಿ ಮಗಳನ್ನು ನೋಡಲು ಪತಿಗೆ ಅವಕಾಶ ನೀಡಿದ್ದರಿಂದ ಪತ್ನಿಯ ಮನೆಗೆ ತೆರಳಿದ್ದರು. 
ಈ ವೇಳೆ ಇಬ್ಬರ ಮದುವೆ ಮಾತಿಗೆ ಮಾತು ಶುರುವಾಗಿ ಸಹಾಯಕ್ಕಾಗಿ ಆಕೆ ಜೋರಾಗಿ ಕೂಗಿಕೊಂಡಿದ್ದಾಳೆ. ಇದರಿಂದ ವಿಚಲಿತನಾದ ಜಸ್ವೀಂದರ್ ಸಿಂಗ್ ಅಡುಗೆ ಮನೆಗೆ ಹೋಗಿ ಚೂರಿ ತಂದು ಆಕೆಗೆ ಇರಿದು ನಂತರ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 
ಮಹಿಳೆಯ ಕಿರುಚಾಟ ಕೇಳಿಸಿಕೊಂಡ ನೆರೆಮನೆಯರು ಆಗಮಿಸಿ ಪತಿ-ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದರಾದರು ಮಾರ್ಗಮಧ್ಯೆ ಪತಿ ಅನುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT