ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯ ಆಸ್ಪತ್ರೆಯಲ್ಲಿ ಅಸ್ವಸ್ಥಗೊಂಡ ತನ್ನ ಮಗುವನ್ನು ನೋಡಿಕೊಳ್ಳುತ್ತಿರುವ ಮಹಿಳೆ 
ದೇಶ

ಉತ್ತರ ಪ್ರದೇಶ: ಶಾಲೆ ಬಳಿ ರಾಸಾಯನಿಕ ಸೋರಿಕೆ; 300 ಮಕ್ಕಳು ಅಸ್ವಸ್ಥ

ಶ್ಯಾಮ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆ ಯಿಂದ ಹೊರಹೊಮ್ಮಿದ ವಿಷಪೂರಿತ ಗಾಳಿ ಸೇವನೆಯಿಂದ ಸುಮಾರು 300 ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ಈಡಾಗಿರುವ ಘಟನೆ ನಡೆದಿದೆ.

ಲಕ್ನೋ: ಉತ್ತರ ಪ್ರದೇಶದ ಶ್ಯಾಮ್ಲಿ ಜಿಲ್ಲೆ ಯ ಸಕ್ಕರೆ ಕಾರ್ಖಾನೆ ಯಿಂದ ಹೊರಹೊಮ್ಮಿದ ವಿಷಪೂರಿತ ಗಾಳಿ ಸೇವನೆಯಿಂದ ಸುಮಾರು  300 ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ಈಡಾಗಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಮಿಷನರ್ ಸಹರಾನ್ಪುರ್ ಅವರಿಗೆ ಈ ವಿಷಯ ಕುರಿತು ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ಶಾಮ್ಲಿಯ ಖಾಸಗಿ ಶಾಲೆಗೆ (ಸರಸ್ವತಿ ಶಿಶು ಮಂದಿರ ಪಬ್ಲಿಕ್ ಸ್ಕೂಲ್) ಸೇರಿದ ವಿದ್ಯಾರ್ಥಿಗಳು ಸಕ್ಕರೆ ಕಾರ್ಖಾನೆಯಿಂದ ಗ್ಯಾಸ್ ಸೋರಿಕೆಯಾದ ನಂತರ ಹೊಟ್ಟೆ ನೋವು, ವಾಕರಿಕೆ ಆಗುತ್ತಿರುವುದಾಗಿ ದೂರು ನೀಡಿದರು.
"ಇದೇ ರೀತಿಯ ಘಟನೆಗಳು ಈ ಹಿಂದೆ ಸಹ ನಡೆದಿವೆ, ತನಿಖೆ ನಡೆಯುತ್ತಿದೆ ಮತ್ತು ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಮೀರತ್ ವಲಯ ವಲಯದ ಎಡಿಜಿ, ಪ್ರಶಾಂತ ಕುಮಾರ್ ತಿಳಿಸಿದ್ದಾರೆ.
ಎಲ್ಲಾ ಮಕ್ಕಳು ಸುರಕ್ಷಿತರಾಗಿದ್ದಾರೆ ಮತ್ತು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು
ಮುಖ್ಯ ಕಾರ್ಯದರ್ಶಿ, ಅವನಿಶ್ ಅವಸ್ಥಿ "ಕಮಿಷನರ್ ಸಹರಾನ್ಪುರ್ ಅವರು ಶ್ಯಾಮ್ಲಿ ಘಟನೆಗೆ ಸಂಬಂಧಿಸಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ ಅನಾರೋಗ್ಯ ಪೀಡಿತ ಮಕ್ಕಳಿಗೆ ಎಲ್ಲಾ ಸಹಾಯವನ್ನು ಒದಗಿಸಲು ಡಿಎಂ ಮತ್ತು ಎಲ್ಲಾ ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ" ಎಂದರು
ಸ್ಥಳೀಯರು ಸಕ್ಕರೆ ಕಾರ್ಖಾನೆ ನೌಕರರು ತ್ಯಾಜ್ಯ ಘಟಕಗಳಲ್ಲಿ ರಾಸಾಯನಿಕಗಳನ್ನು ಸುರಿಯುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ, ಇಂದು ರಾಸಾಯನಿಕಯುಕ್ತ ಗಾಳಿ ಮಕ್ಕಳ ಅನಾರೋಗ್ಯಕ್ಕೆ ಕಾರಣವಾಗಿದ್ದು ಅವರಲ್ಲಿ ಕೆಲವರು ಪ್ರಜ್ಞಾ  ಹೀನ ಸ್ಥಿತಿಯಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಪಶ್ಚಿಮ ಬಂಗಾಳ: ಇಬ್ಬರಿಗೆ ನಿಪಾ ವೈರಸ್ ಪಾಸಿಟಿವ್, ನರ್ಸ್‌ಗಳ ಸ್ಥಿತಿ ಗಂಭೀರ

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

SCROLL FOR NEXT