ವಿವೇಕ್ ಡೆಬ್ರಾಯ್ 
ದೇಶ

ಉತ್ಪಾದನೆಯಲ್ಲಿನ ಹೆಚ್ಚಳ ಜಿಡಿಪಿ ಏರಿಕೆಗೆ ಮುಖ್ಯ: ವಿವೇಕ್ ಡೆಬ್ರಾಯ್

ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ಏರಿಕೆಯಾಗಬೇಕೆಂದರೆ ಉತ್ಪಾದನೆಯಲ್ಲಿ ಹೆಚ್ಚಳವಾಗಬೇಕು ಎಂದು ಖ್ಯಾತ ಅರ್ಥಶಾಸ್ತ್ರಜ್ಞ, ನೀತಿ ಆಯೋಗದ ಸದಸ್ಯ ವಿವೇಕ್ ಡೆಬ್ರಾಯ್ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ಏರಿಕೆಯಾಗಬೇಕೆಂದರೆ ಉತ್ಪಾದನೆಯಲ್ಲಿ ಹೆಚ್ಚಳವಾಗಬೇಕು ಎಂದು ಖ್ಯಾತ ಅರ್ಥಶಾಸ್ತ್ರಜ್ಞ, ನೀತಿ ಆಯೋಗದ ಸದಸ್ಯ ವಿವೇಕ್ ಡೆಬ್ರಾಯ್ ಅಭಿಪ್ರಾಯಪಟ್ಟಿದ್ದಾರೆ. 
ರಾಷ್ಟ್ರೀಯ ಆದಾಯಕ್ಕೆ ಹಲವು ಮೂಲಗಳಿವೆ. ಆದರೆ ಉತ್ಪಾದನಾ ವಲಯದಲ್ಲಿನ ಹೆಚ್ಚಳ ಒಟ್ಟು ರಾಷ್ಟ್ರೀಯ ಉತ್ಪನ್ನ ಏರಿಕೆಗೆ ಮುಖ್ಯವಾಗಲಿದೆ ಎಂದು ವಿವೇಕ್ ಡೆಬ್ರಾಯ್ ಸಿಐಐ ಆಯೋಜಿಸಲಾಗಿದ್ದ ಇಂಟರ್ ನೆಟ್ ಆಫ್ ಥಿಂಗ್ಸ್ 2017 ಶೃಂಗಸಭೆಯಲ್ಲಿ ಹೇಳಿದ್ದಾರೆ.  
ಭಾರತದ ಆರ್ಥಿಕತೆ ಕುಸಿದಿರುವ ಪರಿಣಾಮ ಪ್ರಧಾನಿ ನರೇಂದ್ರ ಮೋದಿ 5 ಸದಸ್ಯರ ಆರ್ಥಿಕ ಸಲಹಾ ಸಮಿತಿ ರಚಿಸಿ, ಆರ್ಥಿಕತೆಯ ಪುನಶ್ಚೇತನಕ್ಕೆ ಸಲಹೆ ನೀಡುವಂತೆ ಸೂಚಿಸಿದ್ದರು. ಈ ಸಮಿತಿಯಲ್ಲಿ ವಿವೇಕ್ ಡೆಬ್ರಾಯ್ ಸಹ ಇದ್ದು, ಇಎಸಿ ಕುರಿತು ಮಾಧ್ಯಮಗಳಿಗೆ ಅ.11 ರಂದು ಸ್ವತಃ ತಾವೇ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ಸರ್ಕಾರಿ ಮೂಲಗಳ ಪ್ರಕಾರ ಅ.11 ರಂದು ಇಎಸಿಯ ಮೊದಲ ಸಭೆ ನಡೆಯಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ‘ದಿಕ್ಕು ತಪ್ಪಿಸುವ ಅಸ್ತ್ರ’; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!

SCROLL FOR NEXT