ಸಾಂದರ್ಭಿಕ ಚಿತ್ರ 
ದೇಶ

ಮೆಟ್ರೋ ದರ ಏರಿಕೆ ಹಿಂತೆಗೆದುಕೊಳ್ಳಲು ದೆಹಲಿ ಸರ್ಕಾರ ರೂ. 3 ಸಾವಿರ ಕೋಟಿ ಕೊಡಲಿ: ಬಿಜೆಪಿ

ಮೆಟ್ರೊ ದರ ಏರಿಕೆ ಪ್ರಸ್ತಾಪವನ್ನು ಹಿಂತೆಗೆದುಕೊಂಡರೆ ದೆಹಲಿ ಸರ್ಕಾರವೇ 3,000 ಕೋಟಿ ರೂಪಾಯಿ..

ನವದೆಹಲಿ: ಮೆಟ್ರೊ ದರ ಏರಿಕೆ ಪ್ರಸ್ತಾಪವನ್ನು ಹಿಂತೆಗೆದುಕೊಂಡರೆ ದೆಹಲಿ ಸರ್ಕಾರವೇ 3,000 ಕೋಟಿ ರೂಪಾಯಿ ಭರಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಒತ್ತಾಯಿಸಿದೆ. ಮೆಟ್ರೊ ದರ ಏರಿಕೆ ವಿರುದ್ಧ ಸದನದಲ್ಲಿ ನಿರ್ಣಯ ಹೊರಡಿಸುವುದಕ್ಕೆ ಕೂಡ ಬಿಜೆಪಿ ನಿರಾಕರಿಸಿದೆ. 
ದೆಹಲಿ ಸರ್ಕಾರದ ಸಾರಿಗೆ ಸಚಿವ ಕೈಲಾಶ್ ಗೆಹ್ಲೊಟ್ ಮಂಡಿಸಿದ ಉದ್ದೇಶಿತ ಮೆಟ್ರೊ ದರ ಏರಿಕೆಯ ನಿರ್ಣಯವನ್ನು ಸದನ ಸದಸ್ಯರು ಧ್ವನಿ ಮತದ ಮೂಲಕ ಅನುಮೋದಿಸಿದರು. ಮೆಟ್ರೊ ರೈಲಿನ ಸಂಪೂರ್ಣ ನಿರ್ವಹಣೆ ನಷ್ಟವನ್ನು ರಾಜ್ಯ ಸರ್ಕಾರವೇ ಭರಿಸಬೇಕೆಂದು ನಿಯಮ ನಿಬಂಧಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ವಿಜೇಂದರ್ ಗುಪ್ತಾ ತಿಳಿಸಿದ್ದಾರೆ. ಮೆಟ್ರೊ ರೈಲಿನ ದರ ಏರಿಕೆಯನ್ನು ನಿಲ್ಲಿಸಬೇಕೆಂದರೆ ದೆಹಲಿ ಸರ್ಕಾರ 3,000 ಕೋಟಿ ರೂಪಾಯಿ ವಾರ್ಷಿಕ ಅನುದಾನ ನೀಡಬೇಕೆಂದು ಹೇಳಿದ್ದಾರೆ.
ದೆಹಲಿ ಮೆಟ್ರೊ ರೈಲು ನಿಗಮದಲ್ಲಿ ಕೇಂದ್ರ ಹಾಗೂ ದೆಹಲಿ ರಾಜ್ಯ ಸರ್ಕಾರಗಳು ಸಮಾನ ಪಾಲುದಾರರು ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಎರಡೂ ಸರ್ಕಾರಗಳು ಸಮಾನವಾಗಿ ಕಾರ್ಯಚರಣೆ ನಷ್ಟವನ್ನು ಭರ್ತಿ ಮಾಡುವುದು ಮುಖ್ಯಮಂತ್ರಿಯವರ ಈ ನಡೆಯ ಹಿಂದಿನ ಉದ್ದೇಶವಾಗಿದೆ ಎಂದು ಆರೋಪಿಸಿದರು. 
ಮೆಟ್ರೊ ದರ ಏರಿಕೆಯನ್ನು ಹಿಂತೆಗೆದುಕೊಂಡರೆ 3,000 ಕೋಟಿ ರೂಪಾಯಿ ಕಾರ್ಯಚರಣೆ ವೆಚ್ಚ ಭರಿಸುವ ನಿಯಮ ನಾಳೆಯಿಂದಲೇ ಜಾರಿಗೆ ಬರಲಿದೆ. ದೆಹಲಿ ಮೆಟ್ರೊ ಸುಗಮವಾಗಿ ಕಾರ್ಯನಿರ್ವಹಿಸಲು ದೆಹಲಿ ಸರ್ಕಾರ ಅಡ್ಡಿಯನ್ನುಂಟುಮಾಡುತ್ತಿದೆ. 2016ರ ಅಂತ್ಯದ ವೇಳೆಗೆ ದೆಹಲಿ ಮೆಟ್ರೊದ ಮೂರನೇ ಹಂತದ ಕಾಮಗಾರಿ ಮುಗಿಯಬೇಕಾಗಿತ್ತು. ಆದರೆ ದೆಹಲಿ ಸರ್ಕಾರದ ನಿಷ್ಕ್ರಿಯತೆಯಿಂದ 15 ತಿಂಗಳುಗಳ ಕಾಲ ಕೆಲಸ ವಿಳಂಬವಾಯಿತು ಎಂದು ಗುಪ್ತ ಆರೋಪಿಸಿದರು.
ಅಲ್ಲದೆ ದೆಹಲಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ನ್ನು ಶೇಕಡಾ 5ರಷ್ಟು ತಗ್ಗಿಸಬೇಕು ಎಂದು ಒತ್ತಾಯಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT