ಚಿತ್ರವನ್ನು ಸಾಂದರ್ಭಿಕವಾಗಿ ಬಳಸಲಾಗಿದೆ 
ದೇಶ

ಹಿಂದೂ ದೇವತೆಯ ಶ್ಲೋಕ ತಪ್ಪಾಗಿ ಹಾಡಿದ ಮುಸ್ಲಿಂ ಗಾಯಕನ ಬರ್ಬರ ಹತ್ಯೆ, ಗ್ರಾಮ ತೊರೆದ 200 ಮುಸ್ಲೀಮರು

ಹಿಂದೂ ದೇವತೆಯ ಶ್ಲೋಕಗಳನ್ನು ತಪ್ಪಾಗಿ ಹಾಡಿದ ಮುಸ್ಲಿಂ ಜನಪದ ಗಾಯಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು...

ಜೈಪುರ: ಹಿಂದೂ ದೇವತೆಯ ಶ್ಲೋಕಗಳನ್ನು ತಪ್ಪಾಗಿ ಹಾಡಿದ ಮುಸ್ಲಿಂ ಜನಪದ ಗಾಯಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಕೊಲೆ ಬಳಿಕ ಭಯಭೀತರಾಗಿರುವ 200ಕ್ಕೂ ಹೆಚ್ಚು ಮುಸ್ಲಿಂರು ಗ್ರಾಮ ತೊರೆದಿರುವ ಘಟನೆ ರಾಜಸ್ಥಾನದ ದಾಂತಲ್ ನಲ್ಲಿ ನಡೆದಿದೆ. 
ಪಾಕ್ ಗಡಿ ಭಾಗಕ್ಕೆ ಹೊಂದಿಕೊಂಡಂತಿರುವ ರಾಜಸ್ಥಾನದ ಜೈಪುರದ ದಾಂತಲ್ ಗ್ರಾಮದಲ್ಲಿ ಮುಸ್ಲಿಂರು ಪಲಾಯನಗೈದಿದ್ದು ಶಾಲೆಗಳು ಮತ್ತು ಸರ್ಕಾರಿ ಕಚೇರಿಗಳ ಬಳಿ ಆಶ್ರಯ ಪಡೆದಿದ್ದಾರೆ. 
ಸೆಪ್ಟೆಂಬರ್ 27ರಂದು ಮುಸ್ಲಿಂ ಜನಪದ ಗಾಯಕ 45ರ ಹರೆಯದ ಅಹಮದ್ ಖಾನ್ ಎನ್ನುವವರು ಸಮಾರಂಭವೊಂದರಲ್ಲಿ ಹಾಡುತ್ತಿರುವ ವೇಳೆ ಹಿಂದೂ ದೇವತೆಯ ಶ್ಲೋಕಗಳನ್ನು ತಪ್ಪಾಗಿ ಪಠಿಸಿದ್ದಾರೆ. ಈ ವೇಳೆ ತಕರಾರು ತೆಗೆದ ಅರ್ಚಕ ರಮೇಶ್ ಸುತಾರ್ ಎಂಬಾತ ತನ್ನ ಬೆಂಬಲಿಗರೊಂದಿಗೆ ಬಂದು ಸಂಗೀತ ಪರಿಕರಗಳನ್ನು ಧ್ವಂಸಗೈದು ಮಾರಣಾಂತಿಕವಾಗಿ ಥಳಿಸಿ ಖಾನ್ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದರು.
ಲಾಂಗ ಮಂಗನಿಯಾರ್ ಜನಾಂಗಕ್ಕೆ ಸೇರಿದ ಗಾಯಕ ಅಮಹದ್ ಖಾನ್ ಅವರು ಹಿಂದೂ ದೇವರ ಗೀತೆಗಳನ್ನು ದೇವಾಲಯಗಳಲ್ಲಿ ಹಾಡುತ್ತಿದ್ದರು. ತಲೆಮಾರುಗಳಿಂದ ಅವರ ಕುಟುಂಬ ಈ ಸಂಪ್ರದಾಯ ಆಚರಿಸಿಕೊಂಡು ಬಂದಿತ್ತು. ಇದೀಗ ಗಾಯಕನ ಕೊಲೆಯಿಂದಾಗಿ ಹೆದರಿರುವ ಗ್ರಾಮಸ್ಥರು ತಮ್ಮ ಮನೆಗಳಿಗೆ ಮರಳಲು ಹೆದರುತ್ತಿದ್ದಾರೆ. ಗ್ರಾಮಕ್ಕೆ ಸರ್ಕಾರ ಪ್ಯಾರ ಮಿಲಿಟರಿ ಪಡೆಗಳನ್ನು ಕಳುಹಿಸಿ ಭದ್ರತೆ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT