ಗುರ್ಮೀತ್ ರಾಮ್ ರಹೀಂ ಮತ್ತು ಹನಿಪ್ರೀತ್ 
ದೇಶ

ಪಂಚಕುಲ ಹಿಂಸಾಚಾರದ ಮಾಸ್ಟರ್ ಮೈಂಡ್ ನಾನೇ: ಹನಿಪ್ರೀತ್ ತಪ್ಪೊಪ್ಪಿಗೆ

ಆಗಸ್ಟ್ 25 ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದೋಷಿ ಎಂದು ಪಂಚಕುಲ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದ ಬಳಿಕ ನಡೆದ ...

ಚಂಡಿಗಡ: ಆಗಸ್ಟ್ 25 ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದೋಷಿ ಎಂದು ಪಂಚಕುಲ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದ ಬಳಿಕ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ಬಾಬಾನ ದತ್ತು ಪುತ್ರಿ ಹನಿಪ್ರೀತ್  ಇನ್ಸಾನ್ ಳನ್ನು ವಿಚಾರಣೆಗೊಳಪಡಿಸಿದ್ದಾರೆ.
ಪಂಚಕುಲ ಹಿಂಸಾಚಾರದ ಮಾಸ್ಟರ್ ಮೈಂಡ್ ನಾನೇ ಎಂದು ಹರಿಯಾಣದ ವಿಶೇಷ ಪೊಲೀಸ್ ಅಧಿಕಾರಿಗಳ ತಂಡದ ಮುಂದೆ ಹನಿಪ್ರೀತ್ ತಪ್ಪೊಪ್ಪಿಕೊಂಡಿದ್ದಾಳೆ.  ಗುರ್ಮಿತ್ ರಾಮ್ ರಹೀಂ ಗೆ ಶಿಕ್ಷೆ ಪ್ರಮಾಣ ಪ್ರಕಟವಾದ ನಂತರ ನಡೆದ ಹಿಂಸಾಚಾರದಲ್ಲಿ 38 ಮಂದಿ ತಮ್ಮ ಜೀವ ಕಳೆದು ಕೊಂಡಿದ್ದರು.
ಹಿಂಸಾಚಾರ ನಡೆಸಲು ಅದಕ್ಕಾಗಿ ಹಣ ನೀಡಲು ಡೇರಾ ಕಾರ್ಯಕರ್ತರಿಗೆ ಜವಾಬ್ದಾರಿ ನೀಡಲಾಗಿತ್ತು ಎಂದು ಹೇಳಿಕೆ ನೀಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ಲ್ಯಾಪ್ ಟಾಪ್ ನಲ್ಲಿ ಸೇವ್ ಆಗಿದ್ದು, ಶೀಘ್ರವೇ ಅದನ್ನು ವಶ ಪಡಿಸಿಕೊಳ್ಳುವುದಾಗಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಆಗಸ್ಟ್ 25 ರಂದು ನಡೆದ ಹಿಂಸಾಚಾರದ ನೀಲಿನಕ್ಷೆ ಆಗಸ್ಟ್ 17 ರಂದು ನಡೆದ ಸಭೆಯಲ್ಲಿ ತಯಾರಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಹಿಂಸಾಚಾರದ ಪ್ರಕರಣ ಹೊರತು ಪಡಿಸಿ ಡೇರಾದ ಎಲ್ಲಾ ಹಣಕಾಸು ವ್ಯವಹಾರಗಳ ಮಾಹಿತಿ ಹನಿ ಪ್ರೀತ್ ಲ್ಯಾಪ್ ಟ್ಯಾಪ್ ನಲ್ಲಿ ಇದೆ ಎಂದು ಪೊಲೀಸರು ನಂಬಿದ್ದಾರೆ. ರಾಮ್ ರಹೀಂ ಬಹಿರಂಗ ಪಡಿಸದ ಸ್ಥಳ ಹಾಗೂ ಗುಪ್ತ ಖಾತೆಗಳ ಬಗ್ಗೆ ಹನಿಪ್ರೀತ್ ಗೆ ಮಾಹಿತಿ ಯಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT