ನರೇಂದ್ರ ಮೋದಿ 
ದೇಶ

ಭಾರತಕ್ಕೆ ಸಂಪನ್ಮೂಲಗಳ ಕೊರತೆ ಇಲ್ಲ: ಪ್ರಧಾನಿ ನರೇಂದ್ರ ಮೋದಿ

ಭಾರತದ ಅಭಿವೃದ್ಧಿಗಾಗಿ ಬೇಕಿರುವ ಸಂಪನ್ಮೂಲಗಳ ಕೊರತೆ ಇಲ್ಲ ಆದರೆ ಒಳ್ಳೆಯ ಆಡಳಿತದಲ್ಲಿ ಕೊರತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಭಾರತದ ಅಭಿವೃದ್ಧಿಗಾಗಿ ಬೇಕಿರುವ ಸಂಪನ್ಮೂಲಗಳ ಕೊರತೆ ಇಲ್ಲ ಆದರೆ ಒಳ್ಳೆಯ ಆಡಳಿತದಲ್ಲಿ ಕೊರತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. 
ರಾಜ್ಯಗಳಲ್ಲಿರುವ ಸರ್ಕಾರಗಳ ಆಡಳಿತ ಯಂತ್ರ ದಕ್ಷವಾಗಿದ್ದು, ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವೆಡೆಗಳಲ್ಲಿ ಬದಲಾವಣೆಗಳು ಕಾಣುತ್ತಿವೆ ಎಂದು ಮೋದಿ ಹೇಳಿದ್ದಾರೆ. ಆರ್ ಎಸ್ಎಸ್, ಜನಸಂಘದ ನಾಯಕ ನಾನಾಜಿ ದೇಶ್ ಮುಖ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ,   
ರಾಜ್ಯಗಳಲ್ಲಿ ಬಡತನ ಹೆಚ್ಚಿರುವೆಡೆ ಮನ್ರೇಗಾ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಕೆಲಸ ಹಂಚಿಕೆ ಕಡಿಮೆ ಇದೆ. ಉತ್ತಮ ಆಡಳಿತ ಇರುವ ರಾಜ್ಯಗಳಲ್ಲಿ ಮನ್ರೇಗಾ ಅಡಿಯಲ್ಲಿ ಉದ್ಯೋಗಗಳು ಹೆಚ್ಚಿದ್ದು, ಬಡತನವೂ ಕಡಿಮೆ ಇದೆ ಎಂದು ಮೋದಿ ಹೇಳಿದ್ದು, ಕೇವಲ ಒಳ್ಳೆಯ ಆಡಳಿತದ ಇಚ್ಛೆ ಇದ್ದರೆ ಸಾಲದು, ಅದಕ್ಕೆ ತಕ್ಕಂತೆ ನಿಗದಿತ ಸಮಯದಲ್ಲಿ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. 
ಮನ್ರೇಗಾ ಯೋಜನೆಗಳಂತಹ ಉದ್ದೇಶವನ್ನು ಮರೆಯಬಾರದು, ಅಭಿವೃದ್ಧಿಯ ಫಲಾನುಭವಿಗಳಿಗೆ ತಲುಪಬೇಕು, ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿದರೆ 2022 ರ ವೇಳೆಗೆ ಕಳೆದ 70 ವರ್ಷಗಳ ಕಾಲ ಕಂಡ ಕನಸು ನನಸಾಗಲಿದೆ ಎಂದು ಮೋದಿ ಹೇಳಿದ್ದಾರೆ. ಕೇವಲ ಮತದಾನ ಮಾಡುವ ಮೂಲಕ ಮಾತ್ರ ಪ್ರಜಾಪ್ರಭುತ್ವವವನ್ನು ಉಳಿಸಲು ಸಾಧ್ಯವಿಲ್ಲ, ಅಭಿವೃದ್ಧಿ ಯೋಜನೆಯಲ್ಲಿ ಜನರು ಭಾಗಿದಾರರಾದಾಗಲೇ ಪ್ರಜಾಪ್ರಭುತ್ವವಾಗಲಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ!

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು, ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!

SCROLL FOR NEXT