ನರೇಂದ್ರ ಮೋದಿ 
ದೇಶ

ಭಾರತಕ್ಕೆ ಸಂಪನ್ಮೂಲಗಳ ಕೊರತೆ ಇಲ್ಲ: ಪ್ರಧಾನಿ ನರೇಂದ್ರ ಮೋದಿ

ಭಾರತದ ಅಭಿವೃದ್ಧಿಗಾಗಿ ಬೇಕಿರುವ ಸಂಪನ್ಮೂಲಗಳ ಕೊರತೆ ಇಲ್ಲ ಆದರೆ ಒಳ್ಳೆಯ ಆಡಳಿತದಲ್ಲಿ ಕೊರತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಭಾರತದ ಅಭಿವೃದ್ಧಿಗಾಗಿ ಬೇಕಿರುವ ಸಂಪನ್ಮೂಲಗಳ ಕೊರತೆ ಇಲ್ಲ ಆದರೆ ಒಳ್ಳೆಯ ಆಡಳಿತದಲ್ಲಿ ಕೊರತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. 
ರಾಜ್ಯಗಳಲ್ಲಿರುವ ಸರ್ಕಾರಗಳ ಆಡಳಿತ ಯಂತ್ರ ದಕ್ಷವಾಗಿದ್ದು, ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವೆಡೆಗಳಲ್ಲಿ ಬದಲಾವಣೆಗಳು ಕಾಣುತ್ತಿವೆ ಎಂದು ಮೋದಿ ಹೇಳಿದ್ದಾರೆ. ಆರ್ ಎಸ್ಎಸ್, ಜನಸಂಘದ ನಾಯಕ ನಾನಾಜಿ ದೇಶ್ ಮುಖ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ,   
ರಾಜ್ಯಗಳಲ್ಲಿ ಬಡತನ ಹೆಚ್ಚಿರುವೆಡೆ ಮನ್ರೇಗಾ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಕೆಲಸ ಹಂಚಿಕೆ ಕಡಿಮೆ ಇದೆ. ಉತ್ತಮ ಆಡಳಿತ ಇರುವ ರಾಜ್ಯಗಳಲ್ಲಿ ಮನ್ರೇಗಾ ಅಡಿಯಲ್ಲಿ ಉದ್ಯೋಗಗಳು ಹೆಚ್ಚಿದ್ದು, ಬಡತನವೂ ಕಡಿಮೆ ಇದೆ ಎಂದು ಮೋದಿ ಹೇಳಿದ್ದು, ಕೇವಲ ಒಳ್ಳೆಯ ಆಡಳಿತದ ಇಚ್ಛೆ ಇದ್ದರೆ ಸಾಲದು, ಅದಕ್ಕೆ ತಕ್ಕಂತೆ ನಿಗದಿತ ಸಮಯದಲ್ಲಿ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. 
ಮನ್ರೇಗಾ ಯೋಜನೆಗಳಂತಹ ಉದ್ದೇಶವನ್ನು ಮರೆಯಬಾರದು, ಅಭಿವೃದ್ಧಿಯ ಫಲಾನುಭವಿಗಳಿಗೆ ತಲುಪಬೇಕು, ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿದರೆ 2022 ರ ವೇಳೆಗೆ ಕಳೆದ 70 ವರ್ಷಗಳ ಕಾಲ ಕಂಡ ಕನಸು ನನಸಾಗಲಿದೆ ಎಂದು ಮೋದಿ ಹೇಳಿದ್ದಾರೆ. ಕೇವಲ ಮತದಾನ ಮಾಡುವ ಮೂಲಕ ಮಾತ್ರ ಪ್ರಜಾಪ್ರಭುತ್ವವವನ್ನು ಉಳಿಸಲು ಸಾಧ್ಯವಿಲ್ಲ, ಅಭಿವೃದ್ಧಿ ಯೋಜನೆಯಲ್ಲಿ ಜನರು ಭಾಗಿದಾರರಾದಾಗಲೇ ಪ್ರಜಾಪ್ರಭುತ್ವವಾಗಲಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಲಯಾಳಂ ನಟಿ ಮೇಲೆ ಹತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಬೆಳಗಾವಿ ಅಧಿವೇಶನ: ವಿಧಾಸಭೆ ಕಲಾಪ ಆರಂಭ; ಸಾಲುಮರದ ತಿಮ್ಮಕ್ಕ ಸೇರಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ

7ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು; ಬೆಂಗಳೂರಿನಲ್ಲಿ 127 ವಿಮಾನ ರದ್ದು; ಮುಂಬೈ, ದೆಹಲಿಯಲ್ಲೂ ಇದೆ ಕಥೆ!

ವಂದೇ ಮಾತರಂ 150ನೇ ವಾರ್ಷಿಕೋತ್ಸವ: ಲೋಕಸಭೆಯಲ್ಲಿಂದು ಚರ್ಚೆ, ಎಲ್ಲರ ಚಿತ್ತ ಪ್ರಧಾನಿ ಮೋದಿಯತ್ತ

ಕರ್ನಾಟಕದ 2.5 ಲಕ್ಷ ಹುದ್ದೆಗಳು ಖಾಲಿ: ಹಣಕಾಸಿನ ಒತ್ತಡ, ಕಾನೂನು ಅಡೆತಡೆಗಳು.. ಹೆಚ್ಚುತ್ತಿರುವ ಯುವಜನರ ಕೋಪ!

SCROLL FOR NEXT