ಪೊಲೀಸರು 
ದೇಶ

ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ: 2 ಪೊಲೀಸ್ ಕಾನ್ಸ್‌ಟೇಬಲ್‌ ಸೇರಿ 3 ಬಂಧನ

ಭಾರತದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗುತ್ತಿರುವ ಹಿಜ್ಬುಲ್ ಮುಜಾಯಿದ್ದೀನ್ ಸಂಘಟನೆಯ ಉಗ್ರರಿಗೆ ಶಸ್ತ್ರಾಸ್ತ್ರ ಮತ್ತು ನೆರವು ನೀಡಿದ ಆರೋಪದಲ್ಲಿ ಇಬ್ಬರು ಪೊಲೀಸರು...

ಶ್ರೀನಗರ: ಭಾರತದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗುತ್ತಿರುವ ಹಿಜ್ಬುಲ್ ಮುಜಾಯಿದ್ದೀನ್ ಸಂಘಟನೆಯ ಉಗ್ರರಿಗೆ ಶಸ್ತ್ರಾಸ್ತ್ರ ಮತ್ತು ನೆರವು ನೀಡಿದ ಆರೋಪದಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಮೂವರನ್ನು ಶೋಪಿಯಾನ್ ನಲ್ಲಿ ಬಂಧಿಸಲಾಗಿದೆ. 
ಬಂಧಿತರ ಪೈಕಿ ಅದೀಲ್ ಅಹಮದ್ ನಿಗ್ರೂ ಸಹ ಒಬ್ಬನಾಗಿದ್ದು ಇತ ಉಗ್ರ ಚಟುವಟಿಕೆಯ ತಳಮಟ್ಟದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ. ನಿಗ್ರೂನನ್ನು ತೀವ್ರ ವಿಚಾರಣೆ ನಡೆಸಿದಾಗ ಆತ ಆಶಿಂಪೋರಾದ ಕಾನ್ಸ್ ಟೇಬಲ್ ಶಬೀರ್ ಅಹಮದ್ ಮಲೀಕ್ ನಿಂದ ಒಂದು ಎಕೆ 47 ಹಾಗೂ 40 ಸಜೀವ ಗುಂಡು ಇನ್ನೊಬ್ಬ ಕಾನ್ಸ್ ಟೇಬಲ್ ನಾಜೀರ್ ಅಹಮದ್ ನಾಜರ್ ನಿಂದ ಸಹ ಒಂದು ಎಕೆ 47 ಹಾಗೂ 40 ಸಜೀವ ಗುಂಡುಗಳನ್ನು ಪಡೆದಿರುವುದಾಗಿ ಹೇಳಿದ್ದಾನೆ. 
ಅದೀಲ್ ಅಹಮದ್ ನಿಗ್ರೂ ಹೇಳಿಕೆ ಹಿನ್ನೆಲೆಯಲ್ಲಿ ಪೊಲೀಸರು ಶಬೀರ್ ಅಹಮದ್ ಮಲೀಕ್ ಹಾಗೂ ನಾಜೀರ್ ಅಹಮದ್ ನಾಜರ್ ನನ್ನು ಬಂಧಿಸಿದ್ದಾರೆ. ಬಂಧತ ನಿಗ್ರೂನಿಂದ ಒಂದು ಎಕೆ 47 ಹಾಗೂ 20 ಸಜೀವ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. 
ಇನ್ನು ಬಂಧಿತ ಇಬ್ಬರು ಕಾನ್ಸ್ ಟೇಬಲ್ ವಿರುದ್ಧ ಎಫ್ಐಆರ್ ದಾಖಲಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT