ಉಮಾ ಭಾರತಿ 
ದೇಶ

ಮಹಾತ್ಮಾ ಗಾಂಧಿ ಹತ್ಯೆಯಿಂದ ಕಾಂಗ್ರೆಸ್​ಗೆ ಲಾಭವಾಗಿದೆ: ಉಮಾ ಭಾರತಿ

ಮಹಾತ್ಮ ಗಾಂಧಿಯ ಹತ್ಯೆಯಿಂದ ಕಾಂಗ್ರೆಸ್​ಗೆ ಲಾಭವಾಗಿದೆ. ಅವರು ಸ್ವಾತಂತ್ರ್ಯ ನಂತರ ಕಾಂಗ್ರೆಸ್​​ಪಕ್ಷವನ್ನು ವಿಸರ್ಜನೆ ಮಾಡಬೇಕು...

ಅಹಮದಾಬಾದ್: ಮಹಾತ್ಮ ಗಾಂಧಿಯ ಹತ್ಯೆಯಿಂದ ಕಾಂಗ್ರೆಸ್​ಗೆ ಲಾಭವಾಗಿದೆ. ಅವರು ಸ್ವಾತಂತ್ರ್ಯ ನಂತರ ಕಾಂಗ್ರೆಸ್​​ಪಕ್ಷವನ್ನು ವಿಸರ್ಜನೆ ಮಾಡಬೇಕು ಎಂದಿದ್ದರು ಎಂದು ಕೇಂದ್ರ ಸಚಿವೆ ಉಮಾ ಭಾರತಿ ಅವರು ಗುರುವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಮಹಾತ್ಮ ಗಾಂಧಿ ಹತ್ಯೆ ಪ್ರಕರಣದ ಮರುವಿಚಾರಣೆ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಉಮಾ ಭಾರತಿ, ಗೋಡ್ಸೆ ಗಾಂಧಿಯವರನ್ನು ಕೊಂದಿರಬಹುದು. ಆದರೆ ಅವರ ಹತ್ಯೆಯಿಂದ ಯಾರಿಗೆ ಲಾಭವಾಗಿದೆ ಮತ್ತು ಹತ್ಯೆಗೆ ಪ್ರಚೋದನೆ ಕೊಟ್ಟವರು ಯಾರು ಎಂದು ಪ್ರಶ್ನಿಸಿದ್ದಾರೆ.
ಮಹಾತ್ಮ ಗಾಂಧಿ ಹತ್ಯೆಯಿಂದ ಸಂಘ ಮತ್ತು ಜನಸಂಘಕ್ಕೆ ಸಾಕಷ್ಟು ಹಾನಿಯಾಗಿದೆ ಮತ್ತು ದೇಶ ಸಹ ಒಬ್ಬ ಮಹಾತ್ಮನನ್ನು ಕಳೆದುಕೊಂಡಿತು. ಆದರೆ ಕಾಂಗ್ರೆಸ್ ಇದರಿಂದ ಲಾಭ ಪಡೆಯಿತು ಎಂದು ಕೇಂದ್ರ ಸಚಿವೆ ಆರೋಪಿಸಿದ್ದಾರೆ.
ಮಹಾತ್ಮಾ ಗಾಂಧಿಯವರನ್ನು ಜನವರಿ 30, 1948ರಂದು ಹಿಂದೂ ಮಹಾಸಭೆಯ ನಾಥೂರಾಂ ವಿನಾಯಕ ಗೋಡ್ಸೆ ದೆಹಲಿಯಲ್ಲಿ ಗುಂಡು ಹಾರಿಸುವ ಮೂಲಕ ಹತ್ಯೆಗೈದಿದ್ದರು.
ಗಾಂಧಿ ಹತ್ಯೆ ಪ್ರಕರಣದ ಮರುವಿಚಾರಣೆ ಕುರಿತ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್​​​ ಕಳೆದ ಅಕ್ಟೋಬರ್ 6ರಂದು ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮರೆಂದರ್ ಶರಣ್ ಅವರನ್ನು ಕೋರ್ಟ್​ನ ಪ್ರತಿನಿಧಿಯಾಗಿ ನೇಮಿಸಿತ್ತು. ಸಂಶೋಧಕ ಮತ್ತು ಅಭಿನವ್ ಭಾರತ್ ಟ್ರಸ್ಟ್​​​ನ ಧರ್ಮದರ್ಶಿಯಾಗಿರುವ ಮುಂಬೈ ಮೂಲದ ಡಾ. ಪಂಕಜ್ ಫಡ್ನಿಸ್ ಗಾಂಧಿ ಹತ್ಯೆ ಕುರಿತು ಮರು ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT