ಮುಕುಲ್ ರಾಯ್ 
ದೇಶ

ನಾನು ಮಮತಾ ಬ್ಯಾನರ್ಜಿ ಸೇವಕನಲ್ಲ: ಮುಕುಲ್ ರಾಯ್

ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ನಾಯಕ ಮುಕುಲ್ ರಾಯ್ ಅವರು ಬುಧವಾರ ಪಕ್ಷ ಮತ್ತು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ...

ನವದೆಹಲಿ: ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ನಾಯಕ ಮುಕುಲ್ ರಾಯ್ ಅವರು ಬುಧವಾರ ಪಕ್ಷ ಮತ್ತು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 
ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದ ಅವರು ಮೇಲ್ಮನೆ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು. 
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪಕ್ಷದಲ್ಲಿ ನಾವು ಸಂಗಾತಿಗಳಾಗಿರಬೇಕು. ಸೇವಕರಲ್ಲ. ನಾನು ಮಮತಾ ಬ್ಯಾನರ್ಜಿಯವರ ಸೇವಕನಲ್ಲ. ಏಕವ್ಯಕ್ತಿ ಪಕ್ಷ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಬಳಿಕ ಬಿಜೆಪಿ ಸೇರುವ ಕುರಿತಂತೆ ಉಂಟಾಗಿರುವ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, 1998ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಜತೆ ಚುನಾವಣೆ ಹೊಂದಾಣಿಕೆ ಮಾಡಿಕೊಳ್ಳುವ ಸಂದರ್ಭದಲ್ಲಿ ಟಿಎಂಸಿ ನಾಯಕತ್ವ ಬಿಜೆಪಿ ಕೋಮುವಾದಿ ಪಕ್ಷವಲ್ಲ ಎಂದು ಹೇಳಿತ್ತು ಎಂದು ನೆನಪಿಸಿದ್ದಾರೆ. 
ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ಮುಕುಲ್ ರಾಯ್ ಅವರನ್ನು ಸೆ.25 ರಂದು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT