ಮೋಹನ್ ಭಾಗವತ್ 
ದೇಶ

ಕಾರ್ಪೊರೇಟ್ ವಲಯದ ಗಣ್ಯರೊಡನೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮನ್ ಕಿ ಬಾತ್

ಆರ್ ಎಸ್ ಎಸ್ ನ ಹಿರಿಯ ಮುಖ್ಯಸ್ಥ ಮೋಹನ್ ಭಾಗವತ್ ಇದೇ ಮೊದಲ ಬಾರಿಗೆ ಹಿರಿಯ ಅಧಿಕಾರಿಗಳು ಹಾಗೂ ಕಾರ್ಪೊರೇಟ್‌ ಸಂಸ್ಥೆಗಳ ಮುಖ್ಯಸ್ಥರ ಜತೆ............

ನವದೆಹಲಿ: ಆರ್ ಎಸ್ ಎಸ್ ನ ಹಿರಿಯ ಮುಖ್ಯಸ್ಥ  ಮೋಹನ್ ಭಾಗವತ್ ಇದೇ ಮೊದಲ ಬಾರಿಗೆ ಹಿರಿಯ ಅಧಿಕಾರಿಗಳು ಹಾಗೂ ಕಾರ್ಪೊರೇಟ್‌ ಸಂಸ್ಥೆಗಳ  ಮುಖ್ಯಸ್ಥರ ಜತೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. 
ದೆಹಲಿಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಮಾತನಾಡಿದ ಭಾಗವತ್ ನಾಗ್ ಪುರ ದಲ್ಲಿ ದಸರಾ ವೇಳೆ ತಾವು ಮಾಡಿದ್ದ ಭಾಷಣದಲ್ಲಿನ ಅಂಶಗಳ ಕುರಿತು ವಿಚಾರ ವಿನಿಮಯ ನಡೆಸಿದರು. 
ರೋಹಿಂಗ್ಯಾ ಮುಸ್ಲಿಂ ನಿರಾಶ್ರಿತರು, ಗೋ ಸಂರಕ್ಷಣೆ, ಪಶ್ಚಿಮ ಬಂಗಾಳ, ಕೇರಳ ಮತ್ತು  ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತು ಭಾಗವತ್‌ ಸಭೆಯಲ್ಲಿ ಪಾಲ್ಗೊಂಡಿದ್ದ ಸೇವಾ ನಿರತ ಹಾಗೂ ನಿವೃತ್ತಿ ಹೊಂದಿರುವ ಐಎಎಸ್‌, ಐಪಿಎಸ್‌, ಐಆರ್‌ಎಸ್‌ ಅಧಿಕಾರಿಗಳು ಹಾಗೂ ಕಾರ್ಪೊರೇಟ್‌ ವಲಯದ ಪ್ರಮುಖರೊಂದಿಗೆ ಸಂವಾದ ನಡೆಸಿದರು.
ಆರ್ ಎಸ್ ಎಸ್ ಧ್ಯೇಯೋದ್ದೇಶದ ವಿವರಣೆ ನೀಡಲಾಗಿದ್ದ ಈ ಸಭೆಯಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಸಲಹೆ ಸೂಚನೆಗಳು ಸಿಕ್ಕಿದವು ಎನ್ನಲಾಗಿದೆ. ಬ್ರಿಟಿಷರ ಕಾಲದ ಶಿಷ್ಟಾಚಾರವನ್ನು ಕೊನೆಗಾಣಿಸಿ ಭಾರತೀಯ ಸಂಸ್ಕೃತಿಯ ಶ್ರೀಮಂತಿಕೆಮತ್ತು ಮೌಲ್ಯಗಳಿಗೆ ಗೌರವ ಒದಗುವಂತೆ ಮಾಡುವುದು ದೇಶದ ಸಮಗ್ರ ಅಭಿವೃದ್ಧಿಯತ್ತ ಗಮನ ನಿದುವುದು  ಸೇರಿದಂತೆ ಹಲವು ಅಂಶಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.
ಆರ್ ಎಸ್ ಎಸ್ ಬೈಠಕ್‌
ಭೂಪಾಲ್ ಸಮೀಪ ಶಾರದಾ ವಿಹಾರ ಪ್ರದೇಶದ ಶಿಶು ಮಂದಿರ ಸ್ಕೂಲ್‌ನಲ್ಲಿ ಇಂದಿನಿಂದ ಮೂರು ದಿನಗಳ ತನಕ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಅಖಿಲ ಭಾರತೀಯ ಕಾರ‍್ಯಕಾರಿಣಿ ಮಂಡಳ(ಎಬಿಕೆಎಂ)ದ ವತಿಯಿಂದ ವಾರ್ಷಿಕ 'ದೀಪಾವಳಿ ಬೈಠಕ್‌' ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT