ಮೋಹನ್ ಭಾಗವತ್ 
ದೇಶ

ಕಾರ್ಪೊರೇಟ್ ವಲಯದ ಗಣ್ಯರೊಡನೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮನ್ ಕಿ ಬಾತ್

ಆರ್ ಎಸ್ ಎಸ್ ನ ಹಿರಿಯ ಮುಖ್ಯಸ್ಥ ಮೋಹನ್ ಭಾಗವತ್ ಇದೇ ಮೊದಲ ಬಾರಿಗೆ ಹಿರಿಯ ಅಧಿಕಾರಿಗಳು ಹಾಗೂ ಕಾರ್ಪೊರೇಟ್‌ ಸಂಸ್ಥೆಗಳ ಮುಖ್ಯಸ್ಥರ ಜತೆ............

ನವದೆಹಲಿ: ಆರ್ ಎಸ್ ಎಸ್ ನ ಹಿರಿಯ ಮುಖ್ಯಸ್ಥ  ಮೋಹನ್ ಭಾಗವತ್ ಇದೇ ಮೊದಲ ಬಾರಿಗೆ ಹಿರಿಯ ಅಧಿಕಾರಿಗಳು ಹಾಗೂ ಕಾರ್ಪೊರೇಟ್‌ ಸಂಸ್ಥೆಗಳ  ಮುಖ್ಯಸ್ಥರ ಜತೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. 
ದೆಹಲಿಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಮಾತನಾಡಿದ ಭಾಗವತ್ ನಾಗ್ ಪುರ ದಲ್ಲಿ ದಸರಾ ವೇಳೆ ತಾವು ಮಾಡಿದ್ದ ಭಾಷಣದಲ್ಲಿನ ಅಂಶಗಳ ಕುರಿತು ವಿಚಾರ ವಿನಿಮಯ ನಡೆಸಿದರು. 
ರೋಹಿಂಗ್ಯಾ ಮುಸ್ಲಿಂ ನಿರಾಶ್ರಿತರು, ಗೋ ಸಂರಕ್ಷಣೆ, ಪಶ್ಚಿಮ ಬಂಗಾಳ, ಕೇರಳ ಮತ್ತು  ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತು ಭಾಗವತ್‌ ಸಭೆಯಲ್ಲಿ ಪಾಲ್ಗೊಂಡಿದ್ದ ಸೇವಾ ನಿರತ ಹಾಗೂ ನಿವೃತ್ತಿ ಹೊಂದಿರುವ ಐಎಎಸ್‌, ಐಪಿಎಸ್‌, ಐಆರ್‌ಎಸ್‌ ಅಧಿಕಾರಿಗಳು ಹಾಗೂ ಕಾರ್ಪೊರೇಟ್‌ ವಲಯದ ಪ್ರಮುಖರೊಂದಿಗೆ ಸಂವಾದ ನಡೆಸಿದರು.
ಆರ್ ಎಸ್ ಎಸ್ ಧ್ಯೇಯೋದ್ದೇಶದ ವಿವರಣೆ ನೀಡಲಾಗಿದ್ದ ಈ ಸಭೆಯಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಸಲಹೆ ಸೂಚನೆಗಳು ಸಿಕ್ಕಿದವು ಎನ್ನಲಾಗಿದೆ. ಬ್ರಿಟಿಷರ ಕಾಲದ ಶಿಷ್ಟಾಚಾರವನ್ನು ಕೊನೆಗಾಣಿಸಿ ಭಾರತೀಯ ಸಂಸ್ಕೃತಿಯ ಶ್ರೀಮಂತಿಕೆಮತ್ತು ಮೌಲ್ಯಗಳಿಗೆ ಗೌರವ ಒದಗುವಂತೆ ಮಾಡುವುದು ದೇಶದ ಸಮಗ್ರ ಅಭಿವೃದ್ಧಿಯತ್ತ ಗಮನ ನಿದುವುದು  ಸೇರಿದಂತೆ ಹಲವು ಅಂಶಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.
ಆರ್ ಎಸ್ ಎಸ್ ಬೈಠಕ್‌
ಭೂಪಾಲ್ ಸಮೀಪ ಶಾರದಾ ವಿಹಾರ ಪ್ರದೇಶದ ಶಿಶು ಮಂದಿರ ಸ್ಕೂಲ್‌ನಲ್ಲಿ ಇಂದಿನಿಂದ ಮೂರು ದಿನಗಳ ತನಕ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಅಖಿಲ ಭಾರತೀಯ ಕಾರ‍್ಯಕಾರಿಣಿ ಮಂಡಳ(ಎಬಿಕೆಎಂ)ದ ವತಿಯಿಂದ ವಾರ್ಷಿಕ 'ದೀಪಾವಳಿ ಬೈಠಕ್‌' ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT