ವಿಕಾಸ್ ಬರಾಲಾ 
ದೇಶ

ಯುವತಿ ಹಿಂಬಾಲಿಸಿದ ಪ್ರಕರಣ: ವಿಕಾಸ್ ಬರಾಲಾ, ಆಶೀಶ್ ವಿರುದ್ಧ ಅಪಹರಣ ಕೇಸ್

ಹಿರಿಯ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ....

ಚಂಡೀಗಢ: ಹಿರಿಯ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತ ಆಶೀಶ್ ಅವರ ವಿರುದ್ಧ ಚಂಡೀಗಢ ಕೋರ್ಟ್ ಹಿಂಬಾಲಿಸಿದ ಮತ್ತು ಅಪಹರಣ ಯತ್ನ ಆರೋಪ ದಾಖಲಿಸಿಕೊಂಡಿದೆ.
ಎಫ್ ಐಆರ್ ನಲ್ಲಿ ಉಲ್ಲೇಖಿಸಿದ ಎಲ್ಲಾ ಆರೋಪಗಳನ್ನು ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ದಾಖಲಿಸಲಾಗಿದೆ ಎಂದು ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಬರ್ಜಿಂದರ್ ಪಾಲ್ ಸಿಂಗ್ ಅವರು ಹೇಳಿದ್ದಾರೆ.
ಕಳೆದ ಆಗಸ್ಟ್ 15ರಂದು ಚಂಡೀಗಢದ ಯುವತಿ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಢ ಪೊಲೀಸರು ವಿಕಾಸ್ ಬರಾಲಾ ಮತ್ತು ಆತನ ಸ್ನೇಹಿತ ಆಶೀಶ್ ನನ್ನು ಬಂಧಿಸಿದ್ದಾರೆ. 
ಬಿಜೆಪಿ ನಾಯಕನ ಪುತ್ರ ಹಾಗೂ ಆತನ ಸ್ನೇಹಿತನ ವಿರುದ್ಧ ಐಪಿಸಿ ಸೆಕ್ಷೆನ್ 365 (ಅಪಹರಣ ಯತ್ನ) ಹಾಗೂ 511ರಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.
ಚಂಡೀಗಢದ ಹೆದ್ದಾರಿಯಲ್ಲಿ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತ ಆಶೀಶ್ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿದ್ದಲ್ಲದೇ, ಆಕೆಯನ್ನು ಅಪಹರಿಸಲು ಯತ್ನಿಸಿದ್ದರು. ಈ ಘಟನೆ ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿತ್ತು.
ಒಂದು ವೇಳೆ ಆರೋಪಿಗಳ ವಿರುದ್ಧದ ಅಪಹರಣ ಯತ್ನ ಆರೋಪ ಸಾಬೀತಾದರೆ ವಿಕಾಸ್ ಬರಾಲಾ ಹಾಗೂ ಆಶೀಶ್ ಗೆ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT