ಟಿ.ಎಂ.ಕೃಷ್ಣ 
ದೇಶ

ರಾಷ್ಟ್ರೀಯ ಭಾವೈಕ್ಯತೆಗಾಗಿ ಟಿಎಂ ಕೃಷ್ಣ ಗೆ ಇಂದಿರಾ ಗಾಂಧಿ ಪ್ರಶಸ್ತಿ

ಖ್ಯಾತ ಕರ್ನಾಟಕ ಸಂಗೀತಗಾರ ಟಿ.ಎಮ್.ಕೃಷ್ಣ ಅವರಿಗೆ ರಾಷ್ಟ್ರೀಯ ಭಾವೈಕ್ಯತೆಗೆ 2015-16ನೇ ಸಾಲಿನ ಇಂದಿರಾ ಗಾಂಧಿ ....

ನವದೆಹಲಿ: ಖ್ಯಾತ ಕರ್ನಾಟಕ ಸಂಗೀತಗಾರ ಟಿ.ಎಮ್.ಕೃಷ್ಣ ಅವರಿಗೆ ರಾಷ್ಟ್ರೀಯ ಭಾವೈಕ್ಯತೆಗೆ 2015-16ನೇ ಸಾಲಿನ ಇಂದಿರಾ ಗಾಂಧಿ ಪ್ರಶಸ್ತಿ ಲಭಿಸಿದೆ.
ಸಂಸ್ಕೃತಿಯಲ್ಲಿ ಸಾಮಾಜಿಕ ಅಂತರ್ಗತೆಗೆ ಕೆಲಸ ಮಾಡಿದ್ದಕ್ಕಾಗಿ ಟಿ.ಎಂ.ಕೃಷ್ಣ ಅವರು ಈ ಹಿಂದೆ ಮ್ಯಾಗ್ಸೆಸೆ ಪ್ರಶಸ್ತಿ ಗಳಿಸಿದ್ದರು.
ಸಂಗೀತದಲ್ಲಿ ಸೃಜನಾತ್ಮಕ ಕಲೆಗೆ ಹೆಸರಾಗಿರುವ ಕೃಷ್ಣ ಅವರು ಸಾಮಾಜಿಕ ವಿಷಯಗಳ ಕುರಿತ ಚರ್ಚೆ ಮತ್ತು ಬರವಣಿಗೆಯಲ್ಲಿ ತೊಡಗಿದ್ದಾರೆ.
 ಚೆನ್ನೈ ಪೊರೊಂಬೋಕ್ ಪಾಡಾಲ್ ಎಂಬ ಹಾಡನ್ನು ಈ ವರ್ಷದ ಆರಂಭದಲ್ಲಿ ಟಿ.ಎಂ.ಕೃಷ್ಣ ಬಿಡುಗಡೆ ಮಾಡಿದ್ದರು. ಚೆನ್ನೈನ ಎನ್ನೊರ್ ಕ್ರೀಕ್ ನಲ್ಲಿ ನಡೆದ ಭೂ ಒತ್ತುವರಿ ಕುರಿತು ಅರಿವು ಮೂಡಿಸಲು ಚೆನ್ನೈ ಉಪಭಾಷೆಯಲ್ಲಿ ಈ ಕರ್ನಾಟಕ ಸಂಗೀತವನ್ನು ಬರೆಯಲಾಗಿತ್ತು. ಕೃಷ್ಣ ಅವರು ಉರುರ್ -ಒಲ್ಕೊಟ್ಟು ಕುಪ್ಪಮ್ ಉತ್ಸವದ ಮುಖ್ಯ ಆಯೋಜಕರಾಗಿದ್ದಾರೆ. ಈ ಉತ್ಸವದಲ್ಲಿ ವಿವಿಧ ಕಲಾ ಪ್ರಕಾರಗಳನ್ನು ಒಂದೇ ವೇದಿಕೆಯಡಿ ತೋರಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT