ಹೈ-ಸ್ಪೀಡ್ ರೈಲು 
ದೇಶ

ಭಾರತದಲ್ಲಿ ಚೀನಾ ಹೈಸ್ಪೀಡ್ ರೈಲು ಯೋಜನೆಗೆ ಡೊಕ್ಲಾಂ ವಿವಾದ ಅಡ್ಡಿ?

ದಕ್ಷಿಣ ಭಾರತದಲ್ಲಿ ಒಂದು ವರ್ಷದ ಹಿಂದೆಯೇ ಕಾರ್ಯಸಾಧ್ಯತೆಯ ಅಧ್ಯಯನ ಪೂರ್ಣಗೊಂಡಿದ್ದ ಮಹತ್ವಕಾಂಕ್ಷಿಯಾ ಹೈ-ಸ್ಪೀಡ್ ಯೋಜನೆ ತಡವಾಗುತ್ತಿದ್ದು ಡೋಕ್ಲಾಂ...

ನವದೆಹಲಿ: ದಕ್ಷಿಣ ಭಾರತದಲ್ಲಿ ಒಂದು ವರ್ಷದ ಹಿಂದೆಯೇ ಕಾರ್ಯಸಾಧ್ಯತೆಯ ಅಧ್ಯಯನ ಪೂರ್ಣಗೊಂಡಿದ್ದ ಮಹತ್ವಕಾಂಕ್ಷಿಯಾ ಹೈ-ಸ್ಪೀಡ್ ಯೋಜನೆ ತಡವಾಗುತ್ತಿದ್ದು ಡೋಕ್ಲಾಂ ವಿವಾದದಿಂದಾಗಿ ಚೀನಾ ಯೋಜನೆಗೆ ಮುಂದಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ. 
ಮುಖ್ಯವಾಗಿ 492 ಕಿ.ಮೀ ಉದ್ದದ ಚೆನ್ನೈ-ಬೆಂಗಳೂರು-ಮೈಸೂರು ಕಾರಿಡಾರ್ ಯೋಜನೆ ಸೇರಿದಂತೆ ಒಟ್ಟಾರೆ ಒಂಬತ್ತು ಹೈ-ಸ್ಪೀಡ್ ರೈಲು ಯೋಜನೆಗೆ ವರದಿಯನ್ನು ತಯಾರಿಸಲಾಗಿತ್ತು. ಆದರೆ ಚೀನಾದ ರೈಲ್ವೆ ಸಚಿವಾಲಯದ ಜತೆಗೆ ಸ್ಪಂದನೆಗೆ ಪ್ರತಿಕ್ರಿಯಿಸಲು ವಿಫಲವಾಗಿದೆ. 
2016ರ ನವೆಂಬರ್ ತಿಂಗಳಲ್ಲೇ ಹೈ-ಸ್ಪೀಡ್ ರೈಲು ಯೋಜನೆಯ ಅಂತಿಮ ವರದಿಯನ್ನು ಚೀನಾ ಕಂಪನಿ ಸಲ್ಲಿಸಿತ್ತು. ತದನಂತರ ನೇರಾ-ನೇರಾ ಮಾತುಕತೆ ಮಾಡುವುದಾಗಿ ಕಂಪನಿ ಹೇಳಿತ್ತು. ಆದರೆ ಇಲ್ಲಿಯವರೆಗೂ ಮಾಕುಕತೆಯ ದಿನಾಂಕವನ್ನು ನಿಗದಿಪಡಿಸಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. 
ಚೀನಾ ರೈಲ್ವೆಯ ಪ್ರತಿಕ್ರಿಯೆ ಕೊರತೆಯಿಂದಾಗಿ ಈ ಮಹತ್ವಕಾಂಕ್ಷಿಯ ಯೋಜನೆ ಹಳ್ಳ ಹಿಡಿಯುತ್ತಿದೆ. 2016ರಲ್ಲಿ ಚೀನಾ ರೈಲ್ವೆ ಎರುವಾನ್ ಎಂಜಿನಿಯರಿಂಗ್ ಗ್ರೂಪ್ ಕಂ ಲಿಮಿಟೆಡ್(ಸಿಆರ್ಇಇಸಿ) ಯೋಜನೆಯ ಸಂಪೂರ್ಣ ವರದಿಯನ್ನು ಸಲ್ಲಿಸಿತ್ತು. ಇದಾದ ಬಳಿಕ ಚೀನಾ ಸಂಸ್ಥೆ ರೈಲ್ವೆ ಮಂಡಳಿ ಜತೆ ಮಾತುಕತೆ ನಡೆಸುವುದಾಗಿ ಹೇಳಿತ್ತು. 
ಕಳೆದ ಆರು ತಿಂಗಳುಗಳಲ್ಲಿ ಇ-ಮೇಲ್ ಗಳ ಮೂಲಕ ಪುನರಾವರ್ತಿತ ಸಂವಹನಗಳನ್ನು ಕಳುಹಿಸಿದ್ದರೂ ಸಹ ಸಿಆರ್ಇಇಸಿನ ಅಧಿಕಾರಿಗಳೊಂದಿಗೆ ಮಂಡಳಿ ಸಂಪರ್ಕದಲ್ಲಿರಲು ಸಾಧ್ಯವಾಗಲಿಲ್ಲ. ಇನ್ನು ಅಲ್ಲಿನ ರಾಯಭಾರಿ ಕಚೇರಿ ಮೂಲಕ ನಾವು ಅವರೊಂದಿಗೆ ಸಂಪರ್ಕದಲ್ಲಿರಲು ಪ್ರಯತ್ನಿಸಿದ್ದೇವೆ, ಆದರೆ ಅವರಿಂದ ಯಾವುದೇ ರೀತಿಯ ಸ್ಪಂದನೆ ಬರುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜೂನ್ 16 ರಿಂದ ಆಗಸ್ಟ್ 28ರವರೆಗೂ ಡೋಕ್ಲಾಂ ವಿವಾದದಿಂದಾಗಿ ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿತ್ತು. ಈ ಹಿನ್ನಲೆಯಲ್ಲಿ ಯೋಜನೆ ಹಳ್ಳಿತಪ್ಪುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT