ಯೋಗಿ ಆದಿತ್ಯನಾಥ್ 
ದೇಶ

ಜಾತಿ, ಓಲೈಕೆ ರಾಜಕಾರಣ ಅಂತ್ಯಗೊಳಿಸಿ: ಯೋಗಿ ಆದಿತ್ಯನಾಥ್

ರಾಜ್ಯವನ್ನು ಜಾತಿ ಮತ್ತು ಓಲೈಕೆ ರಾಜಕಾರಣದಿಂದ ಮುಕ್ತಗೊಳಿಸಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್....

ಗೋರ್ಖಪುರ್: ರಾಜ್ಯವನ್ನು ಜಾತಿ ಮತ್ತು ಒಲೈಕೆ ರಾಜಕಾರಣದಿಂದ ಮುಕ್ತಗೊಳಿಸಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ ಹೇಳಿದ್ದಾರೆ.
ಇಂದು ಗೋರ್ಖಪುರ್ ಗೇಲ್ ಗ್ಯಾಸ್ ಟರ್ಮಿನಲ್ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶವನ್ನು ಒಂದು ಬಲಿಷ್ಠ ರಾಜ್ಯವನ್ನಾಗಿ ಮಾಡಬೇಕು. ಹೀಗಾಗಿ ರಾಜ್ಯದಲ್ಲಿ ಕಳೆದ 15ರಿಂದ 20 ವರ್ಷಗಳಿಂದ ನಡೆಯುತ್ತಿರುವ ಜಾತಿ ಮತ್ತು ಓಲೈಕೆ ರಾಜಕಾರಣ ಅಂತ್ಯಗೊಳಿಸಬೇಕಾಗಿದೆ ಎಂದಿದ್ದಾರೆ.
ನಮ್ಮ ಸರ್ಕಾರ ಪ್ರಮುಖವಾಗಿ ರೈತರ, ಮಹಿಳೆಯರ ಹಾಗೂ ಪ್ರಮುಖ ವಾಹಿನಿಗೆ ಬರದ ಜನರಿಗೆ ಹೆಚ್ಚು ಆದ್ಯತೆ ನೀಡಲಿದೆ ಎಂದು ಉತ್ತರ ಪ್ರದೇಶ ಸಿಎಂ ತಿಳಿಸಿದ್ದಾರೆ.
ಉತ್ತರ ಪ್ರದೇಶ ಬಲಿಷ್ಠವಾದಾಗಲೇ ಭಾರತ ಸಹ ಬಲಿಷ್ಠವಾಗಲು ಸಾಧ್ಯ. ದೇಶಕ್ಕಾಗಿಯಾದರೂ ನಾವು ಜಾತಿ ಮತ್ತು ಓಲೈಕೆ ರಾಜಕಾರಣಕ್ಕೆ ಕಡಿವಾಣ ಹಾಕಬೇಕಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT