ನವದೆಹಲಿ: ಪ್ರಧಾನಿ ಮೋದಿ ಗುಜರಾತ್ ಗೆ ಭೇಟಿ ನೀಡುವುದಕ್ಕೂ ಮುನ್ನ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಜರಾತ್ ನ ಹವಾಮಾನ ಮುನ್ಸೂಚನೆ ನೀಡಿದ್ದು, ಸುಳ್ಳು ಭರವಸೆಗಳ ಮಳೆಯಾಗಲಿದೆ ಎಂದು ಹೇಳಿದ್ದರೆ.
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಲವು ಯೋಜನೆಗಳನ್ನು ಘೋಷಿಸಲಿದ್ದಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಗುಜರಾತ್ ನಲ್ಲಿ ಸುಳ್ಳು ಭರವಸೆಗಳ ಮಳೆಯಾಗಲಿದೆ ಎಂದು ಹೇಳಿದ್ದಾರೆ.
ಗುಜರಾತ್ ಚುನಾವಣೆಯ ದಿನಾಂಕವನ್ನು ಘೋಷಿಸುವುದನ್ನು ತಡ ಮಾಡಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್, ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಿದೆ ಎಂದು ಆರೋಪಿಸಿದೆ. ಗುಜರಾತ್ ಚುನಾವಣೆಯ ದಿನಾಂಕವನ್ನು ಹಿಮಾಚಲ ಪ್ರದೇಶದ ಚುನಾವಣೆಯ ದಿನಾಂಕದೊಂದಿಗೆ ಘೋಷಿಸದೇ ಬಿಜೆಪಿಗೆ ಯೋಜನೆಗಳನ್ನು ಘೋಷಿಸಲು ಅವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.