ಲಖನೌ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ವರ್ಷ ದೀಪಾವಳಿಯನ್ನು ಅಯೋಧ್ಯೆಯಲ್ಲಿ ಆಚರಣೆ ಮಾಡಲಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆ ಮಾಡಿರುವುದಕ್ಕೂ ರಾಮಜನ್ಮಭೂಮಿ ವಿವಾದಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ತಮ್ಮ ಬೆಂಬಲಿಗರೊಂದಿಗೆ ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆ ಮಾಡಲಿದ್ದು, ಸಿದ್ಧತೆ ಭರದಿಂದ ಸಾಗಿದೆ. 2 ಲಕ್ಷ ದೀಪಗಳನ್ನು ಬೆಳಗುವ ಮೂಲಕ ದೀಪಾವಳಿ ಆಚರಣೆಯಲ್ಲಿ ಗಿನ್ನೀಸ್ ವಿಶ್ವ ದಾಖಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ರಾಮಾಯಣಕ್ಕೆ 10,000 ವರ್ಷಗಳ ಇತಿಹಾಸವಿದ್ದು ಅಯೋಧ್ಯೆ ರಾಮಾಯಣದ ಅವಿಭಾಜ್ಯ ಅಂಗ, ಅಯೋಧ್ಯೆ ನಮ್ಮ ಸಂಸ್ಕೃತಿಯ ಹೆಮ್ಮೆ, ರಾಮ ನಮಗೆ ಆದರ್ಶ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.