ಹಿಂಸಾಚಾರದ ವೇಳೆ ಕಾಣಿಸಿಕೊಂಡ ಹೊಗೆ (ಸಂಗ್ರಹ ಚಿತ್ರ) 
ದೇಶ

ಪಂಚಕುಲ ಹಿಂಸಾಚಾರ ಪ್ರಕರಣ: ಡೇರಾ ಸಿಎ, ಓರ್ವ ಪೊಲೀಸ್ ಸಿಬ್ಬಂದಿ ಬಂಧನ

ಅತ್ಯಾಚಾರಿ ಬಾಬಾ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಸಿಬಿಐ ವಿಶೇಷ ಕೋರ್ಟ್ ನಿಂದ ತಪ್ಪಿಸಿಕೊಳ್ಳಲು...

ಚಂಡೀಗಢ: ಅತ್ಯಾಚಾರಿ ಬಾಬಾ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಸಿಬಿಐ ವಿಶೇಷ ಕೋರ್ಟ್ ನಿಂದ ತಪ್ಪಿಸಿಕೊಳ್ಳಲು ಸಂಚು ರೂಪಿಸಿದ ಆರೋಪದ ಮೇಲೆ ಮಂಗಳವಾರ ಓರ್ವ ಪೊಲೀಸ್ ಸಿಬ್ಬಂದಿಯನ್ನು ಮಂಗಳವಾರ ಹರಿಯಾಣ ಪೊಲೀಸರು ಬಂಧಿಸಿದ್ದಾರೆ.
ಇನ್ನು ಪಂಚಕುಲ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಡೇರಾ ಸಿಎಂ ಹಾಗೂ ಎಂಎಸ್ ಜಿ ಕಂಪನಿಯ ಸಿಇಒ ಸಿ.ಪಿ.ಅರೋರಾ ಅವರನ್ನು ಸಹ ಹರಿಯಾಣ ಪೊಲೀಸರ ವಿಶೇಷ ತನಿಖಾ ತಂಡ(ಎಸ್ಐಟಿ) ಇಂದು ಬಂಧಿಸಿದೆ.
ಪಂಚಕುಲ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೊಳಗಾಗಿರುವ ಬಾಬಾ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ಹಾಗೂ ಆಕೆಯ ಆಪ್ತ ಸುಖದೀಪ್ ಕೌರ್ ಅವರನ್ನು ಪಂಚಕುಲ ಕೋರ್ಟ್ ಅಕ್ಟೋಬರ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದ ನಂತರ ಪಂಚಕುಲದಲ್ಲಿ ನಡೆದ ಭಾರಿ ಹಿಂಸಾಚಾರ ಪ್ರಕರಣ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT