ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿಶೇಷ ಪೊಲೀಸ್ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆಗೈದು ಪರಾರಿಯಾಗಿದ್ದಾರೆ.
ದಕ್ಷಿಣ ಕಾಶ್ಮೀರದ ಟ್ರಾಲ್ ನ ವಿಶೇಷ ಪೊಲೀಸ್ ಅಧಿಕಾರಿ ಹಲೀಂ ಗುಜ್ಜಾರ್ ನಿವಾಸದ ಎದುರು ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಇನ್ನು ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಉಗ್ರರಿಗಾಗಿ ಪೊಲೀಸರು ಹಾಗೂ ಭಾರತೀಯ ಯೋಧರು ತೀವ್ರ ಶೋಧ ನಡೆಸುತ್ತಿದ್ದಾರೆ.