ಕಮಲ್ ಹಾಸನ್ 
ದೇಶ

ನೀಲವೆಂಬು ಕದಿನೀರ್ ವಿರುದ್ಧ ಹೇಳಿಕೆ, ನಟ ಕಮಲ್ ಹಾಸನ್ ವಿರುದ್ಧ ಕೇಸ್ ದಾಖಲು

ಡೆಂಗಿ ಜ್ವರವನ್ನು ತಡೆಗಟ್ಟಲು ‘ನೀಲವೆಂಬು ಕದಿನೀರ್’(ಕಹಿಬೇವಿನಿಂದ ತಯಾರಿಸಿದ ಸಾಂಪ್ರದಾಯಿಕ ಔಷಧಿ)....

ಚೆನ್ನೈ: ಡೆಂಗಿ ಜ್ವರವನ್ನು ತಡೆಗಟ್ಟಲು ‘ನೀಲವೆಂಬು ಕದಿನೀರ್’(ಕಹಿಬೇವಿನಿಂದ ತಯಾರಿಸಿದ ಸಾಂಪ್ರದಾಯಿಕ ಔಷಧಿ) ವಿತರಿಸುವುದಕ್ಕಿ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಖ್ಯಾತ ತಮಿಳು ನಟ ಕಮಲ್ ಹಾಸನ್ ಅವರ ವಿರುದ್ಧ ಗುರುವಾರ ಚೆನ್ನೈ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ರಾಜ್ಯ ಸರ್ಕಾರ ‘ನೀಲವೆಂಬು ಕದಿನೀರ್’ವಿತರಿಸುತ್ತಿರುವುದನ್ನು ವಿರೋಧಿಸಿ ಇತ್ತೀಚಿಗೆ ಟ್ವೀಟ್ ಮಾಡಿದ್ದ ಕಮಲ್ ಹಾಸನ್ ಅವರು, ‘ನೀಲವೆಂಬು ಕದಿನೀರ್’ಬಗ್ಗೆ ಸೂಕ್ತ ಸಂಶೋಧನ ನಡೆಯುವವರೆಗೆ ಆ ಸಿದ್ಧ ಔಷಧಿಯನ್ನು ವಿತರಿಸದಂತೆ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದರು.
‘ನೀಲವೆಂಬು ಕದಿನೀರ್’ಅಲೋಪಥಿಕ್ ನಿಂದಲೇ ಸಂಶೋಧನೆ ಮಾಡಬೇಕು ಎಂದೇನಿಲ್ಲ. ಆದರೆ ಸಂಪ್ರದಾಯವಾದಿಗಳೂ ಅದನ್ನು ಮಾಡಲೇಬೇಕು. ಇಲ್ಲದಿದ್ದರೆ ಅದರಿಂದ ಅಡ್ಡ ಪರಿಣಾಮಗಳು ಉಂಟಾಗಬಹುದು ಎಂದು ಕಮಲ್ ಹಾಸನ್ ಅವರು ಎಚ್ಚರಿಕೆ ನೀಡಿದ್ದರು.
ಕಮಲ್ ಹಾಸನ್ ಅವರ ಹೇಳಿಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ತಮಿಳುನಾಡು ಆರೋಗ್ಯ ಸಚಿವ ಸಿ ವಿಜಯಬಾಸ್ಕರ್ ಅವರು, ಡೆಂಗಿ ತಡೆಗೆ ಸಾಂಪ್ರದಾಯಿಕ ಔಷಧಿ ಬಳಕೆಯನ್ನು ಸಮರ್ಥಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?