ಸಾಂದರ್ಭಿಕ ಚಿತ್ರ 
ದೇಶ

ರೈಲುಗಳಲ್ಲಿ ಜೀವರಕ್ಷಕ ಅನಿಲ, ಆಮ್ಲಜನಕ ಸಿಲಿಂಡರ್ ಕಡ್ಡಾಯಗೊಳಿಸಿ ಸುಪ್ರಿಂ ಕೋರ್ಟ್ ಆದೇಶ

ರೈಲುಗಳಲ್ಲಿ ಆಮ್ಲಜನಕ ಸಿಲಿಂಡರ್ ಕಡ್ಡಾಯವಾಗಿ ಇರಬೇಕು. ರೈಲು ಪ್ರಯಾಣದ ವೇಳೆ ಯಾರಿಗೇ ಆಗಲಿ ಉಸಿರಾಟದ ಸಮಸ್ಯೆ ಕಂಡು ಬಂದರೆ ಅವರಿಗೆ ತಕ್ಷಣ ಆಮ್ಲಜನಕ ಪೂರೈಕೆ ಆಗಬೇಕು........

ನವದೆಹಲಿ: ರೈಲುಗಳಲ್ಲಿ ಆಮ್ಲಜನಕ ಸಿಲಿಂಡರ್ ಕಡ್ಡಾಯವಾಗಿ ಇರಬೇಕು. ರೈಲು ಪ್ರಯಾಣದ ವೇಳೆ ಯಾರಿಗೇ ಆಗಲಿ ಉಸಿರಾಟದ ಸಮಸ್ಯೆ ಕಂಡು ಬಂದರೆ ಅವರಿಗೆ ತಕ್ಷಣ ಆಮ್ಲಜನಕ ಪೂರೈಕೆ ಆಗಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ.  ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಎ.ಎಂ. ಖನ್ವಿಲ್ಕರ್‌ ಮತ್ತು ಡಿ.ವೈ. ಚಂದ್ರಚೂಡ್‌ ಅವರನ್ನು ಒಳಗೊಂಡಿದ್ದ ಪೀಠಈ ಆದೇಶ ನೀಡಿದೆ.
ರೈಲುಗಳಲ್ಲಿ ಆಮ್ಲಜನಕ ಸಿಲಿಂಡರ್‌ ಇಟ್ಟುಕೊಳ್ಳಲು ಮತ್ತು ಪ್ರಯಾಣಿಕರು ಉಸಿರಾಟ ಸಮಸ್ಯೆ ಗೆ ಸಿಲುಕಿದಾಗ ಅವರಿಗೆ ಆಮ್ಲಜನಕ ಪೂರೈಸುವುದು ಕಡ್ಡಾಯ. ಈ ಸಂಬಂಧ ಏಮ್ಸ್‌ ನಿಂದ ನಿರ್ದೇಶನಗಳನ್ನು ಪಡೆದುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್‌ ಭಾರತೀಯ ರೈಲ್ವೆಗೆ ನಿರ್ದೇಶಿಸಿದೆ. 
ಅನಾರೋಗ್ಯ ಪೀಡಿತ ಪ್ರಯಾಣಿಕರು ಇಲ್ಲವೇ ಸಂಬಂಧಿಕರು ಟಿಕೆಟ್‌ ಕಲೆಕ್ಟರ್ ಗೆ ವಿಷಯ ತಿಳಿಸಿ ಆಮ್ಲಜನಕ ಸಿಲಿಂದರ್ ಪಡೆದುಕೊಳ್ಳಬೇಕು.  ತುರ್ತು ಸಂದರ್ಭದಲ್ಲಿ ಮುಂದಿನ ನಿಲ್ದಾಣದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಕಲ್ಪಿಸಬೇಕು ಎಂದು ಕೋರ್ಟ್‌ ತನ್ನ ಆದೇಶದಲ್ಲಿ ತಿಳಿಸಿದೆ.
ದೂರ ಪ್ರದೇಶಗಳಿಗೆ ಸಂಚರಿಸುವ ರೈಲುಗಳಲ್ಲಿ ಓರ್ವ ವೈದ್ಯಾಧಿಕಾರಿ, ಓರ್ವ ನರ್ಸ್‌ ಸೇರಿದಂತೆ ಅಗತ್ಯ ವೈದ್ಯಕೀಯ ತಂಡ ಇರಬೇಕು ಎಂದ ರಾಜಸ್ಥಾನ ಹೈಕೋರ್ಟ್‌ ನ ಆದೇಶ ಪ್ರಶ್ನಿಸಿ ಕೇಂದ್ರ ಸಲ್ಲಿಸಿದ್ದ ಮನವಿ ವಿಚಾರಣೆ ನಂತರ ಸುಪ್ರಿಓ ಕೋರ್ಟ್ ಈ ಮಹತ್ವದ ಆದೇಶ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT