ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ 
ದೇಶ

ಪಂಜಾಬ್: ಓಬಿಸಿ, ಕೆನೆಪದರದ ವಾರ್ಷಿಕ ಆದಾಯ ಮಿತಿ ಹೆಚ್ಚಳ

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇತರ ಹಿಂದುಳಿದ ವರ್ಗ (ಓಬಿಸಿ) ಮತ್ತು ಹಿಂದುಳಿದ ವರ್ಗಗಳ ಕೆನೆ ಪದರದ ಒಟ್ಟು ವಾರ್ಷಿಕ ಆದಾಯ ಮಿತಿಯನ್ನು

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇತರ ಹಿಂದುಳಿದ ವರ್ಗ (ಓಬಿಸಿ) ಮತ್ತು ಹಿಂದುಳಿದ ವರ್ಗಗಳ ಕೆನೆ ಪದರದ ಒಟ್ಟು ವಾರ್ಷಿಕ ಆದಾಯ ಮಿತಿಯನ್ನು ಈಗಿರುವ  6 ಲಕ್ಷದಿಂದ 8 ಲಕ್ಷ ರೂ. ಗೆ ಹೆಚ್ಚಳ ಮಾಡಲು ಅನುಮೋದನೆ ನೀಡಿದ್ದಾರೆ.
ಓಬಿಸಿ ಮತ್ತು ಹಿಂದುಳಿದ ವರ್ಗಗಳ ವಿಷಯದಲ್ಲಿ ಹೆಚ್ಚಿನ ಸಾಮಾಜಿಕ ನ್ಯಾಯ ಸಿಗಬೇಕೆನ್ನುವ ಕೇಂದ್ರ ಸರ್ಕಾರದ ನಿರ್ದೇಶನಕ್ಕೆ ಅನುಗುಣವಾಗಿ ಅವರ ಆದಾಯ ಮಿತಿಯಲ್ಲಿ ಏರಿಕೆ ಮಾಡಲಾಗಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಈ ಆಗಸ್ಟ್ ನಲ್ಲಿ ಕೇಂದ್ರ ಸರ್ಕಾರ ಓಬಿಸಿ ಮತ್ತು ಕೆನೆಪದರದವರ ವಾರ್ಷಿಕ ಒಟ್ಟು ಆದಾಯವನ್ನು 6 ರಿಂದ 8 ಲಕ್ಷ  ರೂ.ಗೆ ಏರಿಸಿ ಆದೇಶ ಹೊರಡಿಸಿತ್ತು..
1993ರಲ್ಲಿ ಒಬಿಸಿ ಕೆನೆಪದರ ವಾರ್ಷಿಕ ಆದಾಯ ಮಿತಿ 1 ಲಕ್ಷ ರೂ.ಆಗಿದ್ದಿದ್ದನ್ನು 2004ರಲ್ಲಿ 2.5 ಲಕ್ಷಕ್ಕೆ ಏರಿಸಲಾಗಿತ್ತು. ಮತ್ತೆ 2008ರಲ್ಲಿ 4.5 ಲಕ್ಷ ಕ್ಕೆ, 2013ರಲ್ಲಿ 6ಲಕ್ಕಕ್ಕೆ ಏರಿಕೆ ಮಾಡಲಾಗಿತ್ತು. 1993ರಿಂದ ಈ ತನಕ ಒಟ್ಟು 4 ಬಾರಿ ಓಬಿಸಿ ಮತ್ತು ಹಿಂದುಳಿದ ವರ್ಗದ ಕೆನೆಪದರದವರ  ವಾರ್ಷಿಕ ಆದಾಯ ಮಿತಿಯನ್ನು ಹೆಚ್ಚಳ ಮಾಡಲಾಗಿದೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT