ಹರಿಯಾಣ ಗಾಯಕಿ ಹರ್ಷಿತಾ ದಹಿಯಾ ಕೊಲೆ 
ದೇಶ

ಗಾಯಕಿ ಹರ್ಷಿತಾ ದಹಿಯಾ ಕೊಲೆ ಪ್ರಕರಣಕ್ಕೆ ಹೊಸ ತಿರುವು: ಹತ್ಯೆ ಹಿಂದೆ ಭಾವ ದಿನೇಶ್ ಕೈವಾಡ

ಹರಿಯಾಣ ಗಾಯಕಿ ಹರ್ಷಿತಾ ದಹಿಯಾ ಕೊಲೆ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದ್ದು, ಹತ್ಯೆ ಹಿಂದೆ ತನ್ನ ಕೈವಾಡವಿದೆ ಎಂದು ಹರ್ಷಿತಾ ಸಹೋದರಿ ಪತಿ ದಿನೇಶ್ ತಪ್ಪೊಪ್ಪಿಕೊಂಡಿದ್ದಾನೆಂದು...

ಚಂಡೀಗಢ: ಹರಿಯಾಣ ಗಾಯಕಿ ಹರ್ಷಿತಾ ದಹಿಯಾ ಕೊಲೆ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದ್ದು, ಹತ್ಯೆ ಹಿಂದೆ ತನ್ನ ಕೈವಾಡವಿದೆ ಎಂದು ಹರ್ಷಿತಾ ಸಹೋದರಿ ಪತಿ ದಿನೇಶ್ ತಪ್ಪೊಪ್ಪಿಕೊಂಡಿದ್ದಾನೆಂದು ಶುಕ್ರವಾರ ತಿಳಿದುಬಂದಿದೆ. 
ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಹರ್ಷಿತಾ ಸಹೋದರಿ, ಹರ್ಷಿತಾ ಹತ್ಯೆಯನ್ನು ತನ್ನ ಪತಿ ದಿನೇಶ್ ಮಾಡಿಸಿದ್ದಾರೆಂದು ಹೇಳಿದ್ದರು. ದಹಿಯಾ ತಾಯಿಯ ಕೊಲೆ ಪ್ರಕರಣದಲ್ಲಿ ಹರ್ಷಿತಾ ಪ್ರಮುಖ ಸಾಕ್ಷಿಯಾಗಿದ್ದರು ಈ ಹಿನ್ನಲೆಯಲ್ಲಿ ಹತ್ಯೆ ಮಾಡಿಸಲಾಗಿದೆ ಎಂದು ಆರೋಪಿಸಿದ್ದರು.
ಹೇಳಿಕೆ ಬೆನ್ನಲ್ಲೇ ಹರ್ಷಿತಾ ಭಾವ ದಿನೇಶ್ ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದರು. ಇದರಂತೆ ವಿಚಾರಣೆ ವೇಳೆ ಹತ್ಯೆ ಹಿಂದೆ ತನ್ನ ಕೈವಾಡವಿದೆ ಎಂದು ದಿನೇಶ್ ತಪ್ಪೊಪ್ಪಿಕೊಂಡಿದ್ದಾನೆಂದು ಪಾಣಿಪತ್ ಡಿವೈಎಸ್ಪಿ ದೇಶ್ ರಾಜ್ ಅವರು ಹೇಳಿದ್ದಾರೆ. ಅಲ್ಲದೆ, ದಿನೇಶ್ ನನ್ನು ನಾಲ್ಕು ದಿನಗಳ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 
2014ರಲ್ಲಿ ದೆಹಲಿಯಲ್ಲಿ ಹರ್ಷಿತಾ ಅವರ ತಾಯಿಯವರನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ದಿನೇಶ್ ಆರೋಪಿಯಾಗಿದ್ದು, ಹರ್ಷಿತಾ ಅವರು ಪ್ರಮುಖ ಸಾಕ್ಷಿಯಾಗಿದ್ದರು. ಅಲ್ಲದೆ, ದಿನೇಶ್ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. 
ಗಾಯಕಿ ದರಿಯಾ ಅವರು ದೆಹಲಿಯ ನರೇಲಾ ಪ್ರದೇಶದಲ್ಲಿ ವಾಸವಾಗಿದ್ದರು. ಹರಿಯಾಣದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಹಿಂದಿರುವ ವೇಳೆ ದಹಿಯಾ ಕಾರನ್ನು ಓವರ್ ಟೇಕ್ ಮಾಡಿದ್ದ ದುಷ್ಕರ್ಮಿಗಳು ಹರ್ಷಿತಾ ಅವರ ಕಾರನ್ನು ಅಡ್ಡಗಟ್ಟಿ ಗುಂಡು ಹಾರಿಸಿದ್ದರು. 
ಹರಿಯಾಣ ಚಿತ್ರೋದ್ಯಮದ ಕೆಲವು ವ್ಯಕ್ತಿಗಳಿಂದಲೂ ತಮಗೆ ಜೀವ ಬೆದರಿಕೆ ಇದೆ ಎಂದು ಹರ್ಷಿತಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮೂಲಕ ಹೇಳಿಕೊಂಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT