ಹರಿಯಾಣ ಗಾಯಕಿ ಹರ್ಷಿತಾ ದಹಿಯಾ ಕೊಲೆ 
ದೇಶ

ಗಾಯಕಿ ಹರ್ಷಿತಾ ದಹಿಯಾ ಕೊಲೆ ಪ್ರಕರಣಕ್ಕೆ ಹೊಸ ತಿರುವು: ಹತ್ಯೆ ಹಿಂದೆ ಭಾವ ದಿನೇಶ್ ಕೈವಾಡ

ಹರಿಯಾಣ ಗಾಯಕಿ ಹರ್ಷಿತಾ ದಹಿಯಾ ಕೊಲೆ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದ್ದು, ಹತ್ಯೆ ಹಿಂದೆ ತನ್ನ ಕೈವಾಡವಿದೆ ಎಂದು ಹರ್ಷಿತಾ ಸಹೋದರಿ ಪತಿ ದಿನೇಶ್ ತಪ್ಪೊಪ್ಪಿಕೊಂಡಿದ್ದಾನೆಂದು...

ಚಂಡೀಗಢ: ಹರಿಯಾಣ ಗಾಯಕಿ ಹರ್ಷಿತಾ ದಹಿಯಾ ಕೊಲೆ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದ್ದು, ಹತ್ಯೆ ಹಿಂದೆ ತನ್ನ ಕೈವಾಡವಿದೆ ಎಂದು ಹರ್ಷಿತಾ ಸಹೋದರಿ ಪತಿ ದಿನೇಶ್ ತಪ್ಪೊಪ್ಪಿಕೊಂಡಿದ್ದಾನೆಂದು ಶುಕ್ರವಾರ ತಿಳಿದುಬಂದಿದೆ. 
ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಹರ್ಷಿತಾ ಸಹೋದರಿ, ಹರ್ಷಿತಾ ಹತ್ಯೆಯನ್ನು ತನ್ನ ಪತಿ ದಿನೇಶ್ ಮಾಡಿಸಿದ್ದಾರೆಂದು ಹೇಳಿದ್ದರು. ದಹಿಯಾ ತಾಯಿಯ ಕೊಲೆ ಪ್ರಕರಣದಲ್ಲಿ ಹರ್ಷಿತಾ ಪ್ರಮುಖ ಸಾಕ್ಷಿಯಾಗಿದ್ದರು ಈ ಹಿನ್ನಲೆಯಲ್ಲಿ ಹತ್ಯೆ ಮಾಡಿಸಲಾಗಿದೆ ಎಂದು ಆರೋಪಿಸಿದ್ದರು.
ಹೇಳಿಕೆ ಬೆನ್ನಲ್ಲೇ ಹರ್ಷಿತಾ ಭಾವ ದಿನೇಶ್ ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದರು. ಇದರಂತೆ ವಿಚಾರಣೆ ವೇಳೆ ಹತ್ಯೆ ಹಿಂದೆ ತನ್ನ ಕೈವಾಡವಿದೆ ಎಂದು ದಿನೇಶ್ ತಪ್ಪೊಪ್ಪಿಕೊಂಡಿದ್ದಾನೆಂದು ಪಾಣಿಪತ್ ಡಿವೈಎಸ್ಪಿ ದೇಶ್ ರಾಜ್ ಅವರು ಹೇಳಿದ್ದಾರೆ. ಅಲ್ಲದೆ, ದಿನೇಶ್ ನನ್ನು ನಾಲ್ಕು ದಿನಗಳ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 
2014ರಲ್ಲಿ ದೆಹಲಿಯಲ್ಲಿ ಹರ್ಷಿತಾ ಅವರ ತಾಯಿಯವರನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ದಿನೇಶ್ ಆರೋಪಿಯಾಗಿದ್ದು, ಹರ್ಷಿತಾ ಅವರು ಪ್ರಮುಖ ಸಾಕ್ಷಿಯಾಗಿದ್ದರು. ಅಲ್ಲದೆ, ದಿನೇಶ್ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. 
ಗಾಯಕಿ ದರಿಯಾ ಅವರು ದೆಹಲಿಯ ನರೇಲಾ ಪ್ರದೇಶದಲ್ಲಿ ವಾಸವಾಗಿದ್ದರು. ಹರಿಯಾಣದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಹಿಂದಿರುವ ವೇಳೆ ದಹಿಯಾ ಕಾರನ್ನು ಓವರ್ ಟೇಕ್ ಮಾಡಿದ್ದ ದುಷ್ಕರ್ಮಿಗಳು ಹರ್ಷಿತಾ ಅವರ ಕಾರನ್ನು ಅಡ್ಡಗಟ್ಟಿ ಗುಂಡು ಹಾರಿಸಿದ್ದರು. 
ಹರಿಯಾಣ ಚಿತ್ರೋದ್ಯಮದ ಕೆಲವು ವ್ಯಕ್ತಿಗಳಿಂದಲೂ ತಮಗೆ ಜೀವ ಬೆದರಿಕೆ ಇದೆ ಎಂದು ಹರ್ಷಿತಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮೂಲಕ ಹೇಳಿಕೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT