ಸಂಗ್ರಹ ಚಿತ್ರ 
ದೇಶ

ಯೋಧರಿಗೆ ಕೇಂದ್ರದ ದೀಪಾವಳಿ ಗಿಫ್ಟ್: ಸ್ಯಾಟಲೈಟ್ ಫೋನ್ ಗಳ ಶುಲ್ಕ ರದ್ದು!

ಅತ್ತ ದೀಪಾವಳಿ ಆಚರಣೆಗಾಗಿ ಪ್ರಧಾನಿ ಮೋದಿ ಯೋಧರನ್ನು ಭೇಟಿ ಮಾಡಿದ ಬೆನ್ನಲ್ಲೇ ಇತ್ತ ಕೇಂದ್ರ ಸರ್ಕಾರ ಯೋಧರಿಗೆ ದೀಪಾವಳಿ ಉಡುಗೊರೆ ನೀಡಿದ್ದು, ಯೋಧರು ಬಳಕೆ ಮಾಡುವ ಸ್ಯಾಟಲೈಟ್ ಫೋನ್ ಗಳ ಶುಲ್ಕವನ್ನು ಸಂಪೂರ್ಣವಾಗಿ ರದ್ದು ಮಾಡಿದೆ.

ನವದೆಹಲಿ: ಅತ್ತ ದೀಪಾವಳಿ ಆಚರಣೆಗಾಗಿ ಪ್ರಧಾನಿ ಮೋದಿ ಯೋಧರನ್ನು ಭೇಟಿ ಮಾಡಿದ ಬೆನ್ನಲ್ಲೇ ಇತ್ತ ಕೇಂದ್ರ ಸರ್ಕಾರ ಯೋಧರಿಗೆ ದೀಪಾವಳಿ ಉಡುಗೊರೆ ನೀಡಿದ್ದು, ಯೋಧರು ಬಳಕೆ ಮಾಡುವ ಸ್ಯಾಟಲೈಟ್ ಫೋನ್ ಗಳ  ಶುಲ್ಕವನ್ನು ಸಂಪೂರ್ಣವಾಗಿ ರದ್ದು ಮಾಡಿದೆ.
ಗಡಿಯಲ್ಲಿ ನಮಗೆ ರಕ್ಷಣೆ ನೀಡುವ ಯೋಧರು ತಮ್ಮ ಕುಟುಂಬ, ಬಂಧು, ಬಳಗ, ಆಪ್ತರನ್ನು ಬಿಟ್ಟು ಗಡಿಯಲ್ಲಿ ತಮ್ಮ ಜೀವ ಒತ್ತೆಯಿಟ್ಟು ಸೇವೆ ಸಲ್ಲಿಸುತ್ತಿರುತ್ತಾರೆ. ಇಂತಹ ಯೋಧರಿಗೆ ಕೇಂದ್ರ ದೂರಸಂಪರ್ಕ ಇಲಾಖೆ ಈ ಬಾರಿಯ  ದೀಪಾವಳಿಗೆ ಎರಡು ಕೊಡುಗೆಗಳನ್ನು ಪ್ರಕಟಿಸಿದ್ದು, ಗಡಿಯಲ್ಲಿರುವ ಸಶಸ್ತ್ರ ಪಡೆ ಯೋಧರು ಹಾಗೂ ಅರೆಸೇನಾಪಡೆ ಯೋಧರು, ಸ್ಯಾಟಲೈಟ್‌ ಫೋನ್‌ ಗಳ ಮೂಲಕ ತಮ್ಮ ಬಂಧುಗಳೊಂದಿಗೆ ಮಾತನಾಡಲು ವಿಧಿಸಲಾಗುತ್ತಿದ್ದ  ಕರೆಯ ದರವನ್ನು 5 ರೂ..ಗಳಿಂದ 1 ರೂ..ಗೆ ಇಳಿಸಲಾಗಿದೆ. ಅಲ್ಲದೆ, ಸ್ಯಾಟಲೈಟ್‌ ಫೋನ್‌ ಬಳಕೆಗೆ ಮಾಸಿಕವಾಗಿ ವಿಧಿಸಲಾಗುತ್ತಿದ್ದ 500 ರೂ.. ಶುಲ್ಕವನ್ನೂ ರದ್ದುಗೊಳಿಸಲಾಗಿದೆ. ಆ ಮೂಲಕ ಇನ್ನು ಮುಂದೆ ಯೋಧರು  ಉಚಿತವಾಗಿ ಫೋನ್‌ ಬಳಸಬಹುದಾಗಿದೆ. ಪ್ರಸ್ತುತದ ದೇಶದಲ್ಲಿ 2,500 ಸ್ಯಾಟಲೈಟ್‌ ಫೋನ್‌ ಸಂಪರ್ಕ ನೀಡಲಾಗಿದೆ. 
ಈ  ಬಗ್ಗೆ ಪತ್ರಕರ್ತರ ಜತೆ ಮಾತನಾಡಿದ ದೂರಸಂಪರ್ಕ ಸಚಿವ ಮನೋಜ್‌ ಸಿನ್ಹಾ ಈ ಎರಡು ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಈ ಎರಡೂ ಕೊಡುಗೆಗಳು ಗುರುವಾರ ಅಂದರೆ ಅಕ್ಟೋಬರ್‌ 19ರಿಂದಲೇ ಜಾರಿಗೆ ಬರಲಿದೆ. 
2009-10ರಲ್ಲಿ ಗಡಿ ಭಾಗಗಳಲ್ಲಿನ ಸೈನಿಕರಿಗೆ ಸ್ಯಾಟಲೈಟ್‌ ಫೋನ್‌ ಮೂಲಕ ತಮ್ಮ ಬಂಧುಗಳಿಗೆ ಕರೆ ಮಾಡುವ ಸೌಕರ್ಯ ನೀಡಲಾಗಿತ್ತು. ಆರಂಭದಲ್ಲಿ ಈ ಸೇವೆಯನ್ನು ಟಾಟಾ ಟೆಲಿ ಸಂಸ್ಥೆ ನೀಡುತ್ತಿತ್ತು. ಈಗ ಸರಕಾರಿ  ಸ್ವಾಮ್ಯದ ಬಿಎಸ್‌ಎನ್‌ಎಲ್‌ ಈ ಸೇವೆ ಒದಗಿಸುತ್ತಿದೆ. ಪ್ರತಿ 5 ವರ್ಷಗಳಿಗೊಮ್ಮೆ ಈ ದರವನ್ನು ಪರಿಷ್ಕರಿಸಲಾಗುತ್ತದೆ. ಕರೆ ದರ ಇಳಿಕೆಯಿಂದ ಇಲಾಖೆಗೆ ವಾರ್ಷಿಕವಾಗಿ 3ರಿಂದ 4 ಕೋಟಿ ರೂ.. ಹೊರೆಬೀಳಲಿದ್ದು, ಇದನ್ನು ಕೇಂದ್ರ  ಸರ್ಕಾರ ಭರಿಸುತ್ತದೆ ಎಂದು ದೂರಸಂಪರ್ಕ ಇಲಾಖೆಯ ಕಾರ್ಯದರ್ಶಿ ಅರುಣಾ ಸುಂದರರಾಜನ್‌ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT