ದೀಪಾವಳಿ ದಿನ ದೆಹಲಿ ಅಗ್ನಿಶಾಮಕ ಇಲಾಖೆಗೆ ಬಂದಿತ್ತು 200 ಕರೆ! 
ದೇಶ

ದೀಪಾವಳಿ ದಿನ ದೆಹಲಿ ಅಗ್ನಿಶಾಮಕ ಇಲಾಖೆಗೆ ಬಂದಿತ್ತು 200 ಕರೆ!

ದೇಶಾದ್ಯಂತ ದೀಪಾವಳಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ದೆಹಲಿಯಲ್ಲಿ ಪಟಾಕಿ ನಿಷೇಧಿಸಿದ್ದರ ಹೊರತಾಗಿಯೂ ಅಗ್ನಿ ಅವಗಢಗಳಿಗೇನು ಕಡಿಮೆ ಇರಲಿಲ್ಲ.

ನವದೆಹಲಿ: ದೇಶಾದ್ಯಂತ ದೀಪಾವಳಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ದೆಹಲಿಯಲ್ಲಿ ಪಟಾಕಿ ನಿಷೇಧಿಸಿದ್ದರ ಹೊರತಾಗಿಯೂ ಅಗ್ನಿ ಅವಗಢಗಳಿಗೇನು ಕಡಿಮೆ ಇರಲಿಲ್ಲ. 
ದೆಹಲಿಯ ಅಗ್ನಿಶಾಮಕ ದಳ ಅಗ್ನಿ ಅವಗಢಕ್ಕೆ ಸಂಬಂಧಿಸಿದಂತೆ 200 ಕರೆಗಳನ್ನು ಸ್ವೀಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಂತಿಮ ಅಂಕಿ-ಅಂಶಗಳು ಇನ್ನಷ್ಟೇ ಪ್ರಕಟಗೊಳ್ಳಬೇಕಿದ್ದರೂ ಸುಪ್ರೀಂ ಕೋರ್ಟ್ ಪಟಾಕಿ ನಿಷೇಧಿಸಿದ್ದರ ಪರಿಣಾಮವಾಗಿ ಅಗ್ನಿ ಅವಗಢಕ್ಕೆ ಸಂಬಂಧಿಸಿದ ಪ್ರಕರಣಗಳು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಮಧ್ಯ ರಾತ್ರಿ 12 ರಿಂದ ಮರು ದಿನ ರಾತ್ರಿ 9 ವರೆಗೂ 139 ಕರೆಗಳನ್ನು ಸ್ವೀಕರಿಸಿದ್ದೇವೆ, ಪೀಕ್ ಅವರ್ ನಲ್ಲಿ 62 ಕರೆಗಳನ್ನು ಸ್ವೀಕರಿಸಿದ್ದೇವೆ ಎಂದು ದೆಹಲಿ ಅಗ್ನಿಶಾಮಕ ಸೇವೆ ಅಧಿಕಾರಿಯೊಬ್ಬರು ಹೇಳಿದ್ದಾರೆ. ದೀಪಾವಳಿ ಹಿನ್ನೆಲೆಯಲ್ಲಿ ಇಲಾಖೆ ಫೋನ್ ಲೈನ್ ಗಳನ್ನೂ ಹೆಚ್ಚಿಸಿತ್ತು, ಕಳೆದ ವರ್ಷ ಅಗ್ನಿ ಅವಗಢಕ್ಕೆ ಸಂಬಂಧಿಸಿದಂತೆ 300 ಕರೆಗಳನ್ನು ಸ್ವೀಕರಿಸಿದ್ದೆವು ಎಂದು ಕಂಟ್ರೋಲ್ ರೂಂ ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT