ವಿಜಯ್ ರುಪಾನಿ 
ದೇಶ

ಕಾಂಗ್ರೆಸ್ ಗೆ ಚುನಾವಣಾ ಭೀತಿ: ಚಿದಂಬರಂ ವಿರುದ್ಧ ಗುಜರಾತ್ ಸಿಎಂ ವಾಗ್ದಾಳಿ

ಚುನಾವಣಾ ಆಯೋಗವನ್ನು ಟೀಕಿಸಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ವಿರುದ್ಧ....

ಅಹಮದಾಬಾದ್: ಚುನಾವಣಾ ಆಯೋಗವನ್ನು ಟೀಕಿಸಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ ಅವರು, ಕಾಂಗ್ರೆಸ್ ಗೆ ಚುನಾವಣಾ ಭೀತಿ ಇದೆ ಎಂದು ಶುಕ್ರವಾರ ಹೇಳಿದ್ದಾರೆ.
ಇಂದು ಗಾಂಧಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರುಪಾನಿ ಅವರು, ಚಿದಂಬರಂ ಮತ್ತು ಕಾಂಗ್ರೆಸ್ ಗೆ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯ ಭೀತಿ ಕಾಡುತ್ತಿದೆ ಎಂದಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆ ಸರಿಯಾದ ಸಮಯಕ್ಕೆ ನಡೆಯುತ್ತೆ ಅಂತ ನಾವು ನಂಬಿದ್ದೇವೆ ಮತ್ತು ನಡೆದೇ ನಡೆಯುತ್ತೆ. ಆದರೆ ಕಾಂಗ್ರೆಸ್ ಗೆ ಸೋಲಿನ ಭೀತಿಯಿಂದ ಚುನಾವಣಾ ಆಯೋಗವನ್ನು ಟೀಕಿಸುತ್ತಿದೆ ಎಂದು ಚಿದಂಬರಂ ಅವರಿಗೆ ರುಪಾನಿ ತಿರುಗೇಟು ನೀಡಿದ್ದಾರೆ.
ಚುನಾವಣಾ ಆಯೋಗ ಗುಜರಾತ್ ಚುನಾವಣೆಗೆ ದಿನಾಂಕ ನಿಗದಿಪಡಿಸುವ ಅಧಿಕಾರವನ್ನು ಪ್ರಧಾನಿ ನರೇಂದ್ರ ಮೋದಿಗೆ ನೀಡಿದೆ. ಗುಜರಾತ್ ಸರ್ಕಾರಕ್ಕೆ ಅನುಕೂಲವಾಗಲು ಅದು ಎಲ್ಲಾ ಯೋಜನೆ, ರಿಯಾಯಿತಿಗಳನ್ನು ಘೋಷಣೆ ಮಾಡಿದ ನಂತರ ದೀರ್ಘ ರಜೆಯ ಬಳಿಕ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡುತ್ತದೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸ್ವಿಟ್ಜರ್ಲೆಂಡ್‌ನಲ್ಲಿ ಮಹಾ ಸಂಧಾನ: US-Iran ಹಸ್ತಲಾಘವ, ಹಿಜ್ಬುಲ್ಲಾ–ಇಸ್ರೇಲ್ ಸಂಘರ್ಷ ತಡೆಯಲು ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ..!

ಟ್ರಂಪ್ ಬೆದರಿಕೆಗೆ ಇರಾನ್ ತಿರುಗೇಟು: ಶಾಂತಿ ಮಾತುಕತೆ ಮಧ್ಯೆಯೇ ವಾಕ್‌ಔಟ್‌; ಬೆದರಿಕೆಗಳಿಗೆ ಹೆದರಲ್ಲ-ನಮ್ಮ ತಾಳ್ಮೆ ಪರೀಕ್ಷಿಸಬೇಡಿ- ಅಮೆರಿಕಕ್ಕೆ ಕಠಿಣ ಎಚ್ಚರಿಕೆ

ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ಭಾರತದ ವಿರುದ್ಧ ಮತ್ತೆ ಉದ್ಧಟತನ ತೋರಿದ ಪಾಕಿಸ್ತಾನ..!

Iran ಅಣ್ವಸ್ತ್ರ ಹೊಂದಲು ಬಿಡಲ್ಲ, Hezbollah ಸಂಪೂರ್ಣ ನಾಶವಾಗುವವರೆಗೂ ಹಿಂದೆ ಸರಿಯಲ್ಲ: ನೆತನ್ಯಾಹು ಖಡಕ್ ಎಚ್ಚರಿಕೆ

ಗೋಡ್ಸೆ ದೇಶದ ಮೊದಲ ಭಯೋತ್ಪಾದಕ: ದೇಶಕ್ಕಾಗಿ ಇಂದಿರಾ- ರಾಜೀವ್ ಗಾಂಧಿ ಪ್ರಾಣ ತ್ಯಾಗ; ಬಿ.ಕೆ ಹರಿಪ್ರಸಾದ್