ಮೃತಪಟ್ಟ ಬಾಲಕಿ ತಾಯಿ ಕೊಯ್ಲಿ ದೇವಿ 
ದೇಶ

ಜಾರ್ಖಂಡ್ ಹಸಿವಿನಿಂದ ಸಾವು ಪ್ರಕರಣ: ಸಂತ್ರಸ್ಥ ತಾಯಿಯನ್ನೇ ಊರಿಂದ ಹೊರಗಟ್ಟಿದ ಗ್ರಾಮಸ್ಥರು!

ಜಾರ್ಖಾಂಡ್ ನಲ್ಲಿ ನಡೆದ ಹಸಿವಿನಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಬಾಲಕಿಯ ತಾಯಿಯನ್ನೇ ಗ್ರಾಮಸ್ಥರು ಊರಿನಿಂದ ಹೊರಗೆ ಹಾಕಿದ್ದಾರೆಂದು ತಿಳಿದುಬಂದಿದೆ...

ರಾಂಚಿ: ಜಾರ್ಖಾಂಡ್ ನಲ್ಲಿ ನಡೆದ ಹಸಿವಿನಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಬಾಲಕಿಯ ತಾಯಿಯನ್ನೇ ಗ್ರಾಮಸ್ಥರು ಊರಿನಿಂದ ಹೊರಗೆ ಹಾಕಿದ್ದಾರೆಂದು ತಿಳಿದುಬಂದಿದೆ. 
ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಲ್ಲ ಎಂಬ ಕಾರಣಕ್ಕೆ ರೇಷನ್ ನೀಡಿದ ಕಾರಣ ಹಸಿವಿನಿಂದಾಗಿ 11 ವರ್ಷದ ಬಾಲಕಿಯೊಬ್ಬಳು ಸೆ.28 ಸಾವನ್ನಪ್ಪಿದ್ದಳು. ಈ ಪ್ರಕರಣ ಸುದ್ದಿಗೆ ಗ್ರಾಸವಾಗಿತ್ತು. 
ಪ್ರಕರಣದಿಂದಾಗಿ ಗ್ರಾಮದ ಹೆಸರು ಹಾಳಾಗುತ್ತಿದೆ ಎಂಬ ಕಾರಣಕ್ಕೆ ಇದೀಗ ಗ್ರಾಮದ ಪಂಚಾಯಿತಿ ಸದಸ್ಯರು ಸಂತ್ರಸ್ತ ಬಾಲಕಿಯ ತಾಯಿಯನ್ನು ಊರಿನಿಂದ ಹೊರಹಾಕಿದ್ದಾರೆಂದು ವರದಿಗಳು ತಿಳಿಸಿವೆ. 
ವರದಿಗಳ ಪ್ರಕಾರ, ಪ್ರಕರಣದ ಬಳಿಕ ಕೆಲ ಸ್ಥಳೀಯರು ಮಹಿಳೆಯಿಂದ ಗ್ರಾಮಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಆರೋಪಿಸಿದ್ದಾರೆ. ಬಳಿಕ ಆಕೆಯನ್ನು ಊರಿನಿಂದ ಹೊರಗೆ ಹಾಕಿದ್ದಾರೆ. ಗ್ರಾಮಸ್ಥರ ವರ್ತನೆಯಿಂದ ಭಯಭೀತಳಾಗಿರುವ ಮಹಿಳೆ ಇದೀಗ ಪಂಚಾಯಿತಿ ಕಟ್ಟಡದಲ್ಲಿ ವಾಸವಿದ್ದಾರೆಂದು ಹೇಳಲಾಗುತ್ತಿದೆ. 
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಮ್ದೆಗಾ ಜಿಲ್ಲಾಧಿಕಾರಿಗಳು ಪ್ರಕರಣ ಸಂಬಂಧ ವಿಚಾರಣೆ ನಡೆಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್ ಗಳು 16 ವರ್ಷ ಬಳಿಕ ಡೆಲಿವರಿ, ಬೇಸ್ತು ಬಿದ್ದ ಅಂಗಡಿ ಮಾಲೀಕ.. ಕಾರಣ ಯುದ್ಧ!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

SCROLL FOR NEXT