ಯೋಗಿ ಆದಿತ್ಯನಾಥ್ 
ದೇಶ

ಜನಪ್ರತಿನಿಧಿಗಳು ಬಂದರೇ ಎದ್ದು ನಿಲ್ಲಿ: ಉತ್ತರ ಪ್ರದೇಶ ಸರ್ಕಾರದ ಹೊಸ ಆದೇಶ

ರಾಜ್ಯಮಟ್ಟದ ಎಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಯಾವುದೇ ಸಭೆ ಸಮಾರಂಭಗಳಿಗೆ ಶಾಸಕರು, ಸಚಿವರು ...

ಲಕ್ನೋ:  ರಾಜ್ಯಮಟ್ಟದ ಎಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಯಾವುದೇ ಸಭೆ ಸಮಾರಂಭಗಳಿಗೆ ಶಾಸಕರು, ಸಚಿವರು ಅಥವಾ ಸಂಸದರು ಬಂದಾಗ ಎಲ್ಲ ಸರ್ಕಾರಿ ಅಧಿಕಾರಿಗಳು ಎದ್ದು ನಿಂತು ಗೌರವ ಸೂಚಿಸಬೇಕು ಹಾಗೂ ಅವರನ್ನು ಸ್ವಾಗತಿಸಬೇಕು ಎಂದು ಸೂಚಿಸಿದೆ.
ಅಂತೆಯೇ ಗಣ್ಯ ವ್ಯಕ್ತಿಗಳು ಅಲ್ಲಿಂದ ಮರಳುವಾಗಲೂ ಇದೇ ಮಾದರಿಯನ್ನು ಅನುಸರಿಸಬೇಕು ಎಂದು ಉತ್ತರಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ ಹೊಸ ಆದೇಶ ಹೊರಡಿಸಿದೆ.ಸ್ವತಃ ರಾಜ್ಯ ಮುಖ್ಯ ಕಾರ್ಯದರ್ಶಿ ರಾಜೀವ್‌ ಕುಮಾರ್‌ ಅವರೇ ಜನಪ್ರತಿನಿಧಿಗಳ ಶಿಷ್ಟಾಚಾರದ ಭಾಗವಾಗಿ ಈ ಸೂಚನೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಜೊತೆಗೆ ಶಿಷ್ಟಾಚಾರಗಳನ್ನು ಪಾಲಿಸದೇ ಇದ್ದರೆ ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಅಧಿಕಾರಿಗಳು ನಮಗೆ ಗೌರವ ಕೊಡುತ್ತಿಲ್ಲ ಎಂದು ಅನೇಕ ಶಾಸಕರು ಹಾಗೂ ಸಂಸದರು ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಯವರು ಇಂತಹುದೊಂದು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT