ಯೋಗಿ ಆದಿತ್ಯನಾಥ್ 
ದೇಶ

ಜನಪ್ರತಿನಿಧಿಗಳು ಬಂದರೇ ಎದ್ದು ನಿಲ್ಲಿ: ಉತ್ತರ ಪ್ರದೇಶ ಸರ್ಕಾರದ ಹೊಸ ಆದೇಶ

ರಾಜ್ಯಮಟ್ಟದ ಎಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಯಾವುದೇ ಸಭೆ ಸಮಾರಂಭಗಳಿಗೆ ಶಾಸಕರು, ಸಚಿವರು ...

ಲಕ್ನೋ:  ರಾಜ್ಯಮಟ್ಟದ ಎಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಯಾವುದೇ ಸಭೆ ಸಮಾರಂಭಗಳಿಗೆ ಶಾಸಕರು, ಸಚಿವರು ಅಥವಾ ಸಂಸದರು ಬಂದಾಗ ಎಲ್ಲ ಸರ್ಕಾರಿ ಅಧಿಕಾರಿಗಳು ಎದ್ದು ನಿಂತು ಗೌರವ ಸೂಚಿಸಬೇಕು ಹಾಗೂ ಅವರನ್ನು ಸ್ವಾಗತಿಸಬೇಕು ಎಂದು ಸೂಚಿಸಿದೆ.
ಅಂತೆಯೇ ಗಣ್ಯ ವ್ಯಕ್ತಿಗಳು ಅಲ್ಲಿಂದ ಮರಳುವಾಗಲೂ ಇದೇ ಮಾದರಿಯನ್ನು ಅನುಸರಿಸಬೇಕು ಎಂದು ಉತ್ತರಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ ಹೊಸ ಆದೇಶ ಹೊರಡಿಸಿದೆ.ಸ್ವತಃ ರಾಜ್ಯ ಮುಖ್ಯ ಕಾರ್ಯದರ್ಶಿ ರಾಜೀವ್‌ ಕುಮಾರ್‌ ಅವರೇ ಜನಪ್ರತಿನಿಧಿಗಳ ಶಿಷ್ಟಾಚಾರದ ಭಾಗವಾಗಿ ಈ ಸೂಚನೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಜೊತೆಗೆ ಶಿಷ್ಟಾಚಾರಗಳನ್ನು ಪಾಲಿಸದೇ ಇದ್ದರೆ ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಅಧಿಕಾರಿಗಳು ನಮಗೆ ಗೌರವ ಕೊಡುತ್ತಿಲ್ಲ ಎಂದು ಅನೇಕ ಶಾಸಕರು ಹಾಗೂ ಸಂಸದರು ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಯವರು ಇಂತಹುದೊಂದು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT