ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಇದು 2017ನೇ ಇಸವಿ, 1817 ಅಲ್ಲ: ವಸುಂದರಾ ರಾಜೇ ವಿರುದ್ಧ ಹರಿಹಾಯ್ದ ರಾಹುಲ್

ಭ್ರಷ್ಟ ಅಧಿಕಾರಿಗಳ ಕುರಿತು ಮಾಡುವ ಮಾಧ್ಯಗಳಿಗೆ ಶಿಕ್ಷೆ ವಿಧಿಸುವ ರಾಜಸ್ತಾನ ಸರ್ಕಾರದ ವಿವಾದಿತ ಸುಗ್ರೀವಾಜ್ಞೆ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ...

ನವದೆಹಲಿ: ಭ್ರಷ್ಟ ಅಧಿಕಾರಿಗಳ ಕುರಿತು ಮಾಡುವ ಮಾಧ್ಯಗಳಿಗೆ ಶಿಕ್ಷೆ ವಿಧಿಸುವ ರಾಜಸ್ತಾನ ಸರ್ಕಾರದ ವಿವಾದಿತ ಸುಗ್ರೀವಾಜ್ಞೆ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ವ್ಯಂಗ್ಯವಾಡಿದ್ದಾರೆ. 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಅವರು, ರಾಜಸ್ತಾನ ಮುಖ್ಯಮಂತ್ರಿಗಳೇ, ನಾವು 21ನೇ ಶತಮಾನದಲ್ಲಿದ್ದೇವೆ ಎಂದು ಅತ್ಯಂತ ವಿನಮ್ರವಾಗಿ ಹೇಳುತ್ತೇನೆ. ಇದು 2017ನೇ ಇಸವಿಯೇ ಹೊರತು 1817 ಅಲ್ಲ ಎಂದು ವಸುಂದರಾ ರಾಜೇ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ, ಸುಗ್ರೀವಾಜ್ಞೆ ವಾಕ್ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ ಎಂಬ ಕಾನೂನು ತಜ್ಞರ ಅಭಿಪ್ರಾಯವುಳ್ಳ ವರದಿಯನ್ನು ಟ್ಯಾಗ್ ಮಾಡಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ರಾಜಸ್ತಾನ ಸರ್ಕಾರ ವಿವಾದಿತ ಸುಗ್ರೀವಾಜ್ಞೆಯೊಂದರನ್ನು ಹೊರಡಿಸಿತ್ತು. ಭ್ರಷ್ಟಾಚಾರಿಗಳ ರಕ್ಷಣೆಗೆ ಮುಂದಾಗಿದ್ದ ರಾಜಸ್ತಾನದ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರ, ನಿವೃತ್ತ ಹಾಗೂ ಹಾಲಿ ನ್ಯಾಯಾಧೀಶರ ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಅನುಮತಿ ಪಡೆಯದೇ ಮಾಧ್ಯಮಗಳು ಯಾವುದೇ ವರದಿ ಪ್ರಕಟಿಸದಂತೆ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಸುಗ್ರೀವಾಜ್ಞೆ ಸಾಕಷ್ಟು ವಿರೋಧ ಹಾಗೂ ಚರ್ಚೆಗಳಿಗೆ ಕಾರಣವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT