ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿಯ ವಕ್ತಾರ ನರೇಂದ್ರ ಪಟೇಲ್ 
ದೇಶ

ಬಿಜೆಪಿ ಸೇರಲು 1 ಕೋಟಿ ರು. ಆಮಿಷ ಒಡ್ಡಲಾಗಿತ್ತು: ಪಟೇಲ್ ಸಮುದಾಯದ ಮುಖಂಡನ ಆರೋಪ

ಗುಜರಾತ್ ಚನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಅಲ್ಲಿ ರಾಜಕೀಯ ಚದುರಂಗದಾಟ ಆರಂಭವಾಗಿದ್ದು, ಇದೀಗ ಪಟೇಲ್ ಸಮುದಾಯದ ಮುಖಂಡರು ತಮಗೆ ಬಿಜೆಪಿ ಸೇರಲು 1 ಕೋಟಿ ರು.ಗಳ ಆಮಿಷ ಒಡ್ಡಲಾಗಿತ್ತು ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಅಹ್ಮದಾಬಾದ್: ಗುಜರಾತ್ ಚನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಅಲ್ಲಿ ರಾಜಕೀಯ ಚದುರಂಗದಾಟ ಆರಂಭವಾಗಿದ್ದು, ಇದೀಗ ಪಟೇಲ್ ಸಮುದಾಯದ ಮುಖಂಡರು ತಮಗೆ ಬಿಜೆಪಿ ಸೇರಲು 1 ಕೋಟಿ ರು.ಗಳ ಆಮಿಷ ಒಡ್ಡಲಾಗಿತ್ತು ಎಂಬ ಗಂಭೀರ ಆರೋಪ ಮಾಡಿದ್ದಾರೆ.
ಪ್ರಸ್ತುತ ಗುಜರಾತ್ ನಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದು, ಗುಜರಾತ್ ನಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಪಟೇಲ್ ಸಮುದಾಯದ ಪ್ರತಿಭಟನೆ ಗುಜರಾತ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿತ್ತು. ಕೇವಲ ಗುಜರಾತ್ ಸರ್ಕಾರಕ್ಕೆ ಮಾತ್ರವಲ್ಲದೇ ಕೇಂದ್ರದ ಎನ್ ಡಿಎ ಸರ್ಕಾರಕ್ಕೂ ಈ ಪ್ರತಿಭಟನೆ ಮುಜುಗರವನ್ನುಂಟು ಮಾಡಿತ್ತು. ಇದೀಗ ಮತ್ತೆ ಗುಜರಾತ್ ಬಿಜೆಪಿ ಘಟಕಕ್ಕೆ ಮುಜುಗರವಾಗುವಂತಹ ಆರೋಪವನ್ನು ಪಟೇಲ್ ಸಮುದಾಯ ಮಾಡುತ್ತಿದ್ದು, ಪಟೇಲ್ ಸಮುದಾಯದ ಹೋರಾಟಗಾರರಿಗೆ ಬಿಜೆಪಿ ಸೇರುವಂತೆ 1 ಕೋಟಿ ರು.ಗಳ ಆಮಿಷ ಒಡ್ಡಲಾಗಿತ್ತು ಎಂದು ಆರೋಪಿಸಲಾಗಿದೆ.
ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿಯ ವಕ್ತಾರ ನರೇಂದ್ರ ಪಟೇಲ್ ಅವರು ಗಂಭೀರ ಆರೋಪ ಮಾಡುತ್ತಿದ್ದು, ತಮ್ಮನ್ನು ತಮ್ಮ ಬೆಂಬಲಿಗರು ಬಿಜೆಪಿ ಪಕ್ಷ ಸೇರುವಂತೆ ವರುಣ್ ಪಟೇಲ್ ಆಮಿಷ ಒಡ್ಡಿದ್ದರು. ಈ ಕಾರ್ಯ ಮಾಡಿದರೆ ತಮಗೆ ಒಂದು ಕೋಟಿ ನೀಡುವುದಾಗಿ ಅವರು ಹೇಳಿದ್ದರು. ಗಾಂಧಿನಗರ ಮತ್ತು ಶ್ರೀಕಮಲಂ ನಲ್ಲಿರುವ ಬಿಜೆಪಿ ಕಚೇರಿಗೆ ಕರೆದುಕೊಂಡು ಹೋಗಿದ್ದ ವರುಣ್ ಪಟೇಲ್, ಜೀತು ಭಾಯ್ ವಘಾನಿ ಮತ್ತು ಇತರೆ ಬಿಜೆಪಿ ಸಚಿವರನ್ನು ಭೇಟಿ ಮಾಡಿಸಿದ್ದರು. 
ಬಳಿಕ ಸುಮಾರು 10 ಲಕ್ಷ ರು.ಗಳ ಹಣ ಇರುವ ಬ್ಯಾಗ್ ನೀಡಿ ಇದು ಅಡ್ವಾನ್ಸ್ ಮಾತ್ರ..ನಾಳೆ ನೀವು ಬಿಜೆಪಿ ಪಕ್ಷ ಸೇರಿದ ಬಳಿಕ ಬಾಕಿ 90 ಲಕ್ಷ ನೀಡುವುದಾಗಿ ಹೇಳಿದರು. ನಾಳೆ ಬಿಜೆಪಿ ಕಚೇರಿಯಲ್ಲಿ ಸಭೆ ಬಳಿಕ ನಿಮಗೆ ಉಳಿದ ಹಣ ನೀಡುವುದಾಗಿ ವರುಣ್ ಪಟೇಲ್ ಹೇಳಿದ್ದರು. ಆದರೆ ಇದು ನನಗೆ ತಪ್ಪು ಎಂದೆನಿಸಿತು. ನನ್ನ ಸಮುದಾಯಕ್ಕೆ ದ್ರೋಹ ಮಾಡಲು ನನ್ನಿಂದ ಸಾಧ್ಯವಿಲ್ಲ ಎಂದು ನರೇಂದ್ರ ಪಟೇಲ್ ಆರೋಪಿಸಿದ್ದಾರೆ. 
ನರೇಂದ್ರ ಪಾಟೀಲ್ ಅವರ ಈ ಹೇಳಿಕೆ ಇದೀಗ ಗುಜರಾತ್ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಇತ್ತೀಚೆಗಷ್ಟೇ ಪಟೇಲ್ ಸಮುದಾಯದ ಹೋರಾಟದ ಮುಂಚೂಣಿಯಲ್ಲಿದ್ದ ಮತ್ತು ಹಾರ್ದಿಕ್ ಪಟೇಲ್ ಆಪ್ತರಾದ ರೇಷ್ಮಾ ಪಟೇಲ್ ಮತ್ತು ವರುಣ್ ಪಟೇಲ್ ಬಿಜೆಪಿಗೆ ಸೇರ್ಪಡೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT