ಜಯ್ ಶಾ 
ದೇಶ

ಮನನಷ್ಟ ಮೊಕದ್ದಮೆ: ದಿ ವೈರ್ ಸಂಪಾದಕರಿಗೆ ಗುಜರಾತ್ ಕೋರ್ಟ್ ನಿಂದ ಸಮನ್ಸ್

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ದಿ ವೈರ್ ಸುದ್ದಿ ಜಾಲತಾಣದ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟಂತೆ ಗುಜರಾತ್ ನ ಮೆಟ್ರೋಪಾಲಿಟನ್ ಕೋರ್ಟ್ ದಿ ವೈರ್ ಸುದ್ದಿ...

ಅಹಮದಾಬಾದ್: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ದಿ ವೈರ್ ಸುದ್ದಿ ಜಾಲತಾಣದ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟಂತೆ ಗುಜರಾತ್ ನ ಮೆಟ್ರೋಪಾಲಿಟನ್ ಕೋರ್ಟ್ ದಿ ವೈರ್ ಸುದ್ದಿ ಜಾಲತಾಣದ ಸಂಪಾದಕರಿಗೆ ಸಮನ್ಸ್ ಜಾರಿ ಮಾಡಿದೆ. 
ನವೆಂಬರ್ 13 ರೊಳಗೆ ಕೋರ್ಟ್ ಎದುರು ಹಾಜರಾಗಬೇಕೆಂದು ದಿ ವೈರ್ ಸಂಪಾದಕರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಜಯ್ ಶಾ ಅವರು ಹಾಜರಿಪಡಿಸಿದ್ದ ಇಬ್ಬರು ಸಾಕ್ಷಿಗಳ ಹೇಳಿಕೆಯನ್ನು ಮೆಟ್ರೋಪಾಲಿಟನ್ ಕೋರ್ಟ್ ನ ನ್ಯಾಯಾಧೀಶರಾದ ಎಸ್ ಕೆ ಗಾಧ್ವಿ ದಾಖಲಿಸಿಕೊಂಡಿದ್ದು, ಮೇಲ್ನೋಟಕ್ಕೆ ಆರೋಪ ಕಂಡುಬರುತ್ತಿದೆ ಎಂದು ಹೇಳಿದ್ದಾರೆ. 
ತಮ್ಮ ಕಕ್ಷಿದಾರರಿಗೆ ಪ್ರತಿಕ್ರಿಯೆಯನ್ನೂ ನೀಡುವುದಕ್ಕ ಅವಕಾಶ ನೀಡದೇ ಆತುರದಲ್ಲಿ ದಿ ವೈರ್ ಸುದ್ದಿ ಜಾಲತಾಣ ವರದಿಯನ್ನು ಪ್ರಕಟಿಸಿದೆ. ವರದಿಯ ಉದ್ದೇಶ ಇದ್ದದ್ದು ಸತ್ಯವನ್ನು ಹೊರತರುವುದಲ್ಲ, ಬದಲಾಗಿ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ವಿಷಯವನ್ನು ಸೃಷ್ಟಿಸುವುದು ಎಂದು ಜಯ್ ಶಾ ಪರ ವಕೀಲ ಎಸ್ ವಿ ರಾಜು ವಾದ ಮಂಡಿಸಿದ್ದಾರೆ. 
ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರ ಆಸ್ತಿ ಕಡಿಮೆ ಅವಧಿಯಲ್ಲಿ ಅಪಾರ ಪ್ರಮಾಣದಲ್ಲಿ ಏರಿಕೆಯಾಗಿರುವುದರ ಬಗ್ಗೆ ದಿ ವೈರ್ ಸುದ್ದಿ ಜಾಲತಾಣ ವರದಿ ಪ್ರಕಟಿಸಿತ್ತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT