ಅರುಣ್ ಜೇಟ್ಲಿ 
ದೇಶ

ನ.08 ರಂದು ಬಿಜೆಪಿಯಿಂದ ಕಪ್ಪುಹಣ ವಿರೋಧಿ ದಿನಾಚರಣೆ

ನ.08 500, 1000 ರೂ ನೋಟುಗಳು ನಿಷೇಧಗೊಂಡು ಒಂದು ವರ್ಷವಾಗಲಿದ್ದು, ಬಿಜೆಪಿ ನ.8 ನ್ನು ಕಪ್ಪುಹಣ ವಿರೋಧಿ ದಿನಾಚರಣೆಯನ್ನಾಗಿ ಆಚರಿಸಲು ನಿರ್ಧರಿಸಿದೆ.

ನವದೆಹಲಿ: ನ.08 500, 1000 ರೂ ನೋಟುಗಳು ನಿಷೇಧಗೊಂಡು ಒಂದು ವರ್ಷವಾಗಲಿದ್ದು, ಬಿಜೆಪಿ ನ.8 ನ್ನು ಕಪ್ಪುಹಣ ವಿರೋಧಿ ದಿನಾಚರಣೆಯನ್ನಾಗಿ ಆಚರಿಸಲು ನಿರ್ಧರಿಸಿದೆ. 
ನೋಟು ನಿಷೇಧವನ್ನು ವಿರೋಧಿಸಿ ವಿಪಕ್ಷಗಳು ನ.8 ರಂದು ಕರಾಳ ದಿನ ಆಚರಿಸುತ್ತಿದ್ದು, ಪ್ರತಿಪಕ್ಷಗಳ ತಂತ್ರಕ್ಕೆ ಪ್ರತಿಯಾಗಿ ಬಿಜೆಪಿ ನ.8 ರಂದು ಕಪ್ಪುಹಣ ವಿರೋಧಿ ದಿನವನ್ನು ಆಚರಿಸಲು ನಿರ್ಧರಿಸಿದೆ. ದೇಶದಲ್ಲಿ ಪರ್ಯಾಯ ಕಪ್ಪುಹಣವಿತ್ತು, ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ ಕಪ್ಪುಹಣ ನಿರ್ಮೂಲನೆಗೆ ಕ್ರಮ ಕೈಗೊಂಡರು, ಆದ್ದರಿಂದ ನ.8 ರಂದು ಬಿಜೆಪಿ ಕಪ್ಪುಹಣ ವಿರೋಧಿ ದಿನವನ್ನು ಆಚರಣೆ ಮಾಡಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 
ಕಪ್ಪುಹಣ ವಿರೋಧಿ ದಿನಾಚರಣೆಯಲ್ಲಿ ಕೇಂದ್ರ ಸಚಿವರು, ಬಿಜೆಪಿ ಮುಖ್ಯಮಂತ್ರಿಗಳು, ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ಜೇಟ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ಗೆ ಕಪ್ಪುಹಣ ನಿಯಂತ್ರಿಸಲು ಹಾಗೂ ಹೊರತೆಗೆಯಲು ಸಾಕಷ್ಟು ಅವಕಾಶ ಇತ್ತು, ಆದರೆ ಮಾಡಲಿಲ್ಲ. ಕಪ್ಪುಹಣ ಹೊರಗೆಳೆಯುವುದಕ್ಕಾಗಿ ಈಗ ಎನ್ ಡಿಎ ಸರ್ಕಾರ ಕೈಗೊಂಡಿರುವ ಕ್ರಮಗಳೂ ಕಡಿಮೆಯದ್ದಲ್ಲ ಎಂದು ಜೇಟ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT