ಆಗ್ರಾಗೆ ಆಗಮಿಸಿದ ಸಿಎಂ ಯೋಗಿ ಆದಿತ್ಯನಾಥ್ 
ದೇಶ

ವಿವಾದಗಳ ನಡುವೆಯೇ ತಾಜ್ ಮಹಲ್ ಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ

ತಾಜ್ ಮಹಲ್ ಕುರಿತ ವಿವಾದಗಳು ತಾರಕಕ್ಕೇರಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಗುರುವಾರ ಬೆಳಗ್ಗೆ ಭೇಟಿ ನೀಡಿದ್ದಾರೆ.

ಆಗ್ರಾ: ತಾಜ್ ಮಹಲ್ ಕುರಿತ ವಿವಾದಗಳು ತಾರಕಕ್ಕೇರಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಗುರುವಾರ ಬೆಳಗ್ಗೆ ಭೇಟಿ ನೀಡಿದ್ದಾರೆ.
ಸ್ವಚ್ಛಭಾರತ ಅಭಿಯಾನದ ನಿಮಿತ್ತ ತಾಜ್ ಮಹಲ್ ನಲ್ಲಿ ಉತ್ತರ ಪ್ರದೇಶ ಸರ್ಕಾರ ಹಮ್ಮಿಕೊಂಡಿರುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥ್ ಪಾಲ್ಗೊಂಡಿದ್ದು, ತಾಜ್ ಮಹಲ್ ನ ಪಶ್ಚಿಮ ದ್ವಾರದಲ್ಲಿ ಕಸ ಗುಡಿಸಲಿದ್ದಾರೆ. ಸಿಎಂ ಆದ ಬಳಿಕ ಅದರಲ್ಲೂ ಪ್ರಮುಖವಾಗಿ ತಾಜ್ ಮಹಲ್ ಕುರಿತ ವಿವಾದಗಳು ಭುಗಿಲೆದ್ದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಯೋಗಿ ಆದಿತ್ಯನಾಥ್ 17ನೇ ಶತಮಾನದ ಐತಿಹಾಸಿಕ ಕಟ್ಟಡ ತಾಜ್ ಮಹಲ್  ಗೆ ಭೇಟಿ ನೀಡಿದ್ದಾರೆ.
ಇಂದಿನ ಭೇಟಿ ಸಂದರ್ಭದಲ್ಲಿ ಸಿಎಂ ಯೋದಿ ಆದಿತ್ಯನಾಥ್ ಅವರು ತಾಜ್ ಮಹಲ್ ನ ಒಳಗೆ ಪ್ರವೇಶ ಮಾಡಲಿದ್ದು, ತಾಜ್ ಮಹಲ್ ನ ವಿವಿಧ ಮೂಲೆಗಳನ್ನು ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೆ ಶಹಜಹಾನ್ ಸಮಾಧಿ,  ಮುಮ್ತಾಜ್ ಮಹಲ್, ಶಹಜಹಾನ್ ಪಾರ್ಕ್ ಗೂ ಯೋಗಿ ಭೇಟಿ ನೀಡಲಿದ್ದಾರೆ.ಕೇವಲ ಭೇಟಿ ಮಾತ್ರವಲ್ಲದೇ ಐತಿಹಾಸಿಕ ಕಟ್ಟದ ಒಳ ಹಾಗೂ ಹೊರಗಿನ ಪ್ರದೇಶಗಳನ್ನು ಕೂಲಂಕುಷವಾಗಿ ಪರಿಶೀಲಿಸಲಿದ್ದಾರೆ. ಅಂತೆಯೇ ಆಗ್ರಾ  ಕೋಟೆಯಿಂದ ನೇರವಾಗಿ ತಾಜ್ ಮಹಲ್ ಗೆ ಪ್ರವಾಸಿಗರು ತೆರಳಲು ಅನುಕೂಲವಾಗುವಂತೆ ಸರ್ಕಾರ ನಿರ್ಮಿಸುತ್ತಿರುವ ಕಾಮಗಾರಿಗೆ ಶಂಕುಸ್ಥಾಪನೆ ಕೂಡ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 500ಕ್ಕೂ ಹೆಚ್ಚು  ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳುವ ಸಾಧ್ಯತೆ ಇದೆ.
ಇನ್ನು ಸಿಎಂ ಯೋಗಿ ಆದಿತ್ಯನಾಥ್ ರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅವನೀಶ್ ಅವಸ್ಥಿ ಹಾಗೂ ಪ್ರವಾಸೋಧ್ಯಮ ಇಲಾಖೆಯ ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಈ ಹಿಂದೆ ಇದೇ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಉತ್ತರ ಪ್ರದೇಶದ ಪ್ರವಾಸಿತಾಣಗಳ ಪಟ್ಟಿಯಿಂದ ತಾಜ್ ಮಹಲ್ ಅನ್ನು ತೆಗೆದು ಹಾಕಿತ್ತು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತಲ್ಲದೇ ತಾಜ್ ಮಹಲ್  ಪರ-ವಿರೋಧ ಚರ್ಚೆಗಳಿಗೂ ದಾರಿ ಮಾಡಿತ್ತು,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT