ದೇಶ

ಮುಂಬೈನ ಬಾಂದ್ರಾದಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

Vishwanath S
ಮುಂಬೈ: ಮುಂಬೈನ ಬಾಂದ್ರಾದ ರೇಲ್ವೆ ನಿಲ್ದಾಣದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ತೊಡಗಿದ್ದಾರೆ. 
ರೇಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದರಿಂದ ರೈಲು ಸೇವೆಗಳನ್ನು ನಿಲ್ಲಿಸುವಂತೆ ಹಿರಿಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 
ಬೆಂಕಿ ನಂದಿಸುವ ಕಾರ್ಯದಲ್ಲಿ 16 ಅಗ್ನಿಶಾಮಕ ವಾಹನ ಸಿಬ್ಬಂದಿಗಳು ತೊಡಗಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಇನ್ನು ಅಗ್ನಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. 
ಮುನಿಸಿಪಲ್ ಕಾರ್ಪೋರೇಷನ್ ಅವರು ಬಾಂದ್ರಾದ ಸ್ಥಳೀಯ ರೈಲು ನಿಲ್ದಾಣದ ಬಳಿ ಕಟ್ಟಡ ತೆರವುಗೊಳಿಸುತ್ತಿರುವ ವೇಳೆ ಅಗ್ನಿ ಅವಘಡ ಸಂಭವಿಸಿದೆ. 
SCROLL FOR NEXT