ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ದಾರಿ ತಪ್ಪಿಸುವ ಜಾಹೀರಾತುಗಳ ವಿರುದ್ಧ ಕಠಿಣ ಕ್ರಮ: ಪ್ರಧಾನಿ ಮೋದಿ

ನೂತನ ಗ್ರಾಹಕ ಸುರಕ್ಷತಾ ಕಾಯ್ದೆಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುವುದು ಹಾಗೂ ತಪ್ಪು ಹಾದಿಗೆಳೆಯುವ ಜಾಹೀರಾತುಗಳ ವಿರುದ್ಧ ಕಠಿಣ ನಿಯಮಾವಳಿಗಳನ್ನು ರೂಪಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ...

ನವದೆಹಲಿ: ನೂತನ ಗ್ರಾಹಕ ಸುರಕ್ಷತಾ ಕಾಯ್ದೆಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುವುದು ಹಾಗೂ ತಪ್ಪು ಹಾದಿಗೆಳೆಯುವ ಜಾಹೀರಾತುಗಳ ವಿರುದ್ಧ ಕಠಿಣ ನಿಯಮಾವಳಿಗಳನ್ನು ರೂಪಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ. 

ದೆಹಲಿಯಲ್ಲಿ ನಡೆದ ಗ್ರಾಹಕರ ಸುರಕ್ಷತೆಯ ಬಗೆಗಿನ ಅಂತರಾಷ್ಟ್ರೀಯ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡಿರುವ ಅವರು, ಗ್ರಾಹಕರ ಸಬಲೀಕರಣ ಅತ್ಯಂತ ಭಾಗ. ತಪ್ಪು ಹಾದಿಗೆಳೆಯುವ ಜಾಹೀರಾತುಗಳ ಮಾರ್ಗಸೂಚಿಗಳನ್ನು ಕಠಿಣಗೊಳಿಸಲಾಗುತ್ತದೆ. ಈ ಕುರಿತು ಶೀಘ್ರದಲ್ಲಿಯೇ ನೂತನ ಗ್ರಾಹಕ ಸುರಕ್ಷತಾ ಕಾಯ್ದೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ. 

ಗ್ರಾಹಕರ ಸುರಕ್ಷತೆ ನಮಮ ಸರ್ಕಾರ ಹೆಚ್ಚಿನ ಆದ್ಯತೆಯನ್ನು ನೀಡಲಿದೆ. ಗ್ರಾಹಕರ ಅಭ್ಯಾಸ ಮತ್ತು ಗ್ರಾಹಕ ಸಮೃದ್ದಿಯತ್ತ ಗ್ರಾಹಕರ ಸುರಕ್ಷತೆಯನ್ನು ಕೊಂಡೊಯ್ಯಲಿದ್ದೇವೆ. ತಪ್ಪು ಹಾದಿಗೆಳೆಯುವ ಜಾಹೀರಾತುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದೇವೆ. ಗ್ರಾಹಕರ ಸಬಲೀಕರಣ ಮತ್ತು ಗ್ರಾಹಕರು ಯಾವುದೇ ರೀತಿಯ ಸಮಸ್ಯೆಗಳು ಅನುಭವಿಸದಂತೆ ಮಾಡಲು ಗಮನ ಹರಿಸಲಾಗುತ್ತಿದೆ. ತಂತ್ರಜ್ಞಾನವನ್ನು ಬಳಸಿ ಗ್ರಾಹಕರ ಕುಂದುಕೊರತೆಗಳನ್ನು ನೀಗಿಸುವತ್ತ ಪ್ರಯತ್ನಗಳನ್ನು ನಡೆಸುತ್ತಿದ್ದೇವೆಂದು ತಿಳಿಸಿದ್ದಾರೆ. 
ಇದೇ ವೇಳೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿ) ಕುರಿತಂತೆ ಮಾತನಾಡಿರುವ ಅವರು, ಜಿಎಸ್'ಟಿ ಜಾರಿಗೆ ತಂದ ಪರಿಣಾಮ ಇದೀಗ ಪರೋಕ್ಷ ಹಾಗೂ ಗುಪ್ತ ತೆರಿಗೆಗಳನ್ನು ಸಂಗ್ರಹಿಸಲಾಗುತ್ತಿದೆ. ಹೊಸ ತೆರಿಗೆ ವ್ಯವಸ್ಥೆಯ ದೊಡ್ಡ ಫಲಾನುಭವಿಗಳು ಗ್ರಾಹಕರು, ಮಧ್ಯಮ ವರ್ಗದ ಜನರಾಗಿದ್ದಾರೆ. ಜಿಎಸ್'ಟಿ ಕಂಪನಿಗಳ ನಡುವೆ ಸ್ಪರ್ಧೆ ಏರ್ಪಡುವಂತೆ ಮಾಡುತ್ತಿದೆ. ಇದರಿಂದ ಸರಕುಗಳ ಮೇಲಿನ ಬೆಲೆ ಕಡಿಮೆಯಾಗಲಿದೆ. ಇದರಿಂದ ಬಡವಲು, ಮಧ್ಯಮವರ್ಗದ ಜನರು ಹಾಗೂ ಗ್ರಾಹಕರಿಲೆ ಲಾಭವಾಗಲಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT