ವಿನೋದ್ ವರ್ಮಾ 
ದೇಶ

ಬೆದರಿಕೆ ಆರೋಪ: ಹಿರಿಯ ಪತ್ರಕರ್ತ ವಿನೋದ್ ವರ್ಮಾ ಬಂಧನ

ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ವಿನೋದ್ ವರ್ಮಾ ಅವರನ್ನು ಘಾಜಿಯಾಬಾದ್ ಪೊಲೀಸರು ಇಂದು ಬಂಧಿಸಿದರು.

ಘಾಜಿಯಾಬಾದ್: ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ವಿನೋದ್ ವರ್ಮಾ ಅವರನ್ನು ಘಾಜಿಯಾಬಾದ್ ಪೊಲೀಸರು ಇಂದು ಬಂಧಿಸಿದರು.
ಘಾಜಿಯಾಬಾದ್ ನ ಇಂದಿರಾಪುರಂನಲ್ಲಿರುವ ಅವರನಿವಾಸದಿಂದ ಅವರನ್ನು ಪೋಲೀಸರು ಬಂಧಿಸಿದ್ದಾರೆ.
ಬಿಬಿಸಿಯ ಮಾಜಿ ಸಂಪಾದಕ ಮತ್ತು ಅಮರ ಉಜಾಲಾ ಡಿಜಿಟಲ್ ನ ಸಂಪಾದಕ ವಿನೋದ್ ವರ್ಮಾ ಅವರನ್ನು ಪೋಲೀಸರು ಬಂಧಿಸಿದ್ದು ಅವರ ಮನೆಯಿಂದ 300 ಸಿಡಿ ಮತ್ತು 1 ಪೆನ್ ಡ್ರೈವ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಛತ್ತೀಸಘಡದಲ್ಲಿ ಇತ್ತೀಚೆಗೆ ನಡೆದ ಪತ್ರಕರ್ತರ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುವ ತಂಡದಲ್ಲಿ ವಿನೋದ್ ವರ್ಮಾ ಕೂಡ ಇದ್ದರು.ಅವರು   ಛತ್ತೀಸಘಡದ ಮಂತ್ರಿಯೊಬ್ಬರ ವಿರುದ್ಧ ಕುಟುಕು ಕಾರ್ಯಾಚರಣೆ ನಡೆಸುತ್ತಿದ್ದರೆಂದು ಹೇಳಲಾಗುತ್ತಿದೆ ಆದರೂ  ಬಂಧನದ ಹಿಂದಿನ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ವಿನೋದ್ ಬಂಧನ ಪತ್ರಿಕೋದ್ಯಮದ ಮೇಲಿನ ಪ್ರಹಾರ, ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT