ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ಪಟಾಕಿ ನಿಷೇಧಕ್ಕೆ ಕಾರಣರಾಗಿದ್ದ ಈ ಮಕ್ಕಳಿಂದ ಈಗ ದೇಶಾದ್ಯಂತ ಪಟಾಕಿ ನಿಷೇಧಕ್ಕೆ ಮನವಿ

ದೀಪಾವಳಿಯಂದು ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧಕ್ಕೆ ಕಾರಣರಾಗಿದ್ದ ಈ ಮೂವರು ಮಕ್ಕಳು ಈಗ ಭಾರತವನ್ನು ಪಟಾಕಿ....

ನವದೆಹಲಿ: ದೀಪಾವಳಿಯಂದು ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧಕ್ಕೆ ಕಾರಣರಾಗಿದ್ದ ಈ ಮೂವರು ಮಕ್ಕಳು ಈಗ ಭಾರತವನ್ನು ಪಟಾಕಿ ಮುಕ್ತಗೊಳಿಸಲು ಹೊರಟಿದ್ದಾರೆ.
ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧವನ್ನು ವಿಸ್ತರಿಸಬೇಕು ಮತ್ತು ದೇಶಾದ್ಯಂತ ಪಟಾಕಿ ಮಾರಾಟವನ್ನು ನಿಷೇಧಿಸಬೇಕು ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಹೊಸದಾಗಿ ಅರ್ಜಿ ಸಲ್ಲಿಸಲಾಗಿದೆ.
ಅರ್ಜುನ್ ಗೋಪಾಲ್, ಆರವ್ ಭಂಡಾರಿ ಮತ್ತು ಜೋಯ ರಾವ್ ಭಸಿನ್ ಎಂಬ ಮೂವರು ಮಕ್ಕಳು, ದೇಶಾದ್ಯಂತ ಪಟಾಕಿ ಮರಾಟ ಮತ್ತು ಪಟಾಕಿ ಸಿಡಿಸುವುದನ್ನು ನಿಷೇಧಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಪಟಾಕಿ ನಿಷೇಧದ ನಡುವೆಯೂ ದೀಪಾವಳಿ ನಂತರ ದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಪಟಾಕಿ ನಿಷೇಧವನ್ನು ವಿಸ್ತರಿಸಬೇಕು ಮತ್ತು ದೇಶಾದ್ಯಂತ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಸಬೇಕು ಎಂದು ಮನವಿ ಮಾಡಿರುವುದಾಗಿ ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.
ಮುಂದೆ ಮದುವೆ ಸೀಸನ್ ಸೇರಿದಂತೆ ಕ್ರಿಸ್ ಮಸ್ ಹಾಗೂ ಹೊಸ ವರ್ಷ ಬರುತ್ತಿದ್ದು, ಈ ವೇಳೆ ಪಟಾಕಿ ಸಿಡಿಸುವುದು ಹೆಚ್ಚಾಗುವ ಸಾಧ್ಯತೆ ಇದ್ದು, ಇದರಿಂದ ನಗರಗಳ ವಾಯು ಮಾಲಿನ್ಯ ಮತ್ತಷ್ಟು ಹೆಚ್ಚಾಗಲಿದೆ ಎಂದು ಅರ್ಜಿದಾರರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಪರಿಸರ ಮಾಲಿನ್ಯದ ಮಟ್ಟ ತಗ್ಗಿಸಲು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ದೀಪಾವಳಿ ವೇಳೆ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್‌) ಪಟಾಕಿ ಮಾರಾಟಕ್ಕೆ ನಿಷೇಧ ಹೇರಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್