ಸುಪ್ರೀಂ ಕೋರ್ಟ್ 
ದೇಶ

ಬ್ಲೂ ವೇಲ್ ಒಂದು ರಾಷ್ಟ್ರೀಯ ಸಮಸ್ಯೆ; ಜಾಗೃತಿ ಮೂಡಿಸಲು ಟೀವಿ ಚಾನೆಲ್ ಗಳಿಗೆ ಸುಪ್ರೀಂ ಸೂಚನೆ

ಬ್ಲೂ ವೇಲ್ ಚಾಲೆಂಜ್ ಗೇಮ್ ಒಂದು ರಾಷ್ಟ್ರೀಯ ಸಮಸ್ಯೆ. ಇದರ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಪ್ರಸಾರ ವಾಹಿನಿಯ ದೂರದರ್ಶನ ಮತ್ತು ಖಾಸಗಿ ಚಾನಲ್ ಗಳು......

ನವದೆಹಲಿ:  ಬ್ಲೂ ವೇಲ್ ಚಾಲೆಂಜ್ ಗೇಮ್ ಒಂದು ರಾಷ್ಟ್ರೀಯ ಸಮಸ್ಯೆ. ಇದರ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಪ್ರಸಾರ ವಾಹಿನಿಯ ದೂರದರ್ಶನ ಮತ್ತು ಖಾಸಗಿ ಚಾನಲ್ ಗಳು ಬ್ಲೂ ವೇಲ್ ಚಾಲೆಂಜ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ತಮ್ಮ ಪ್ರೈಮ್ ಟೈಮ್ ಗಳಲ್ಲಿ ಪ್ರಸಾರ ಮಾದಬೇಕು. ಆ  ಮೂಲಕ ಆಟದಿಂದೊದಗುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ವಕೀಲರಾದ ಎನ್ ಎಸ್ ಪೊನ್ನಯ್ಯ ಅವರು ಬ್ಲೂ ವೇಲ್ ಆಟದ ಮೇಲೆ ಸಂಪೂರ್ಣ ನಿಷೇಧವನ್ನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ನೂರಾರು ಆತ್ಮಹತ್ಯೆಗಳಿಗೆ ಇದು ಕಾರಣ ಎಂದು ದೂರು ಸಲ್ಲಿಸಿದ್ದರು.
ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ಅರ್ಜಿ ವಿಚಾರಣೆ ನಡೆಸಿ ಇದೊಂದು 'ರಾಷ್ಟ್ರೀಯ ಸಮಸ್ಯೆ' ಎಂದು ಹೇಳಿದೆ. ಕೇಂದ್ರ ಸರ್ಕಾರವು ತಾನು ಸಮಸ್ಯೆ ಪರಿಶೀಲನೆಗಾಗಿ ಪರಿಣಿತರ ಸಮಿತಿಯನ್ನು ಸ್ಥಾಪಿಸಿದ್ದು ಮೂರು ವಾರಗಳಲ್ಲಿ ವರದಿಯನ್ನು ತರಿಸಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಸೆಪ್ಟೆಂಬರ್ 15 ರಂದು, ಬ್ಲೂ ವೇಲ್ ಚಾಲೆಂಜ್ ಆಟದ ಮೇಲೆ ಸಂಪೂರ್ಣ ನಿಷೇಧವನ್ನು ಕೋರಿ ಅರ್ಜಿಗೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯವು ನೋಟಿಸ್ ಜಾರಿ ಮಾಡಿತ್ತು.
ರಷ್ಯಾರಲ್ಲಿ ಪ್ರಾರಂಭವಾದ ಈ ಆಟದ ಸುಳಿಗೆ ಸಿಕ್ಕು ಸುಮಾರು 130 ಯುವಕರು ಪ್ರಾಣ ಕಳೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT