ವಿದೇಶಾಂಗ ಇಲಾಖೆಯ ವಕ್ತಾರ ರವೀಶ್ ಕುಮಾರ್ (ಸಂಗ್ರಹ ಚಿತ್ರ) 
ದೇಶ

ನ್ಯಾಯಸಮ್ಮತವಾಗಿದ್ದರೆ ಮಾತ್ರ ಒಬೋರ್ ಗೆ ಬೆಂಬಲ: ಭಾರತ

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಎರಡನೇ ಬಾರಿಗೆ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕರಾದ ಬೆನ್ನಲ್ಲೇ ಚೀನಾದ ಮಹತ್ವಾಕಾಂಕ್ಷಿ ಯೋಜನೆ ಒನ್ ಬೆಲ್ಟ್ ಒನ್ ರೋಡ್ ಗೆ ಭಾರತ ಷರತ್ತುಬದ್ಧ ಬೆಂಬಲ ನೀಡಲು ಸಿದ್ಧವಾಗಿದೆ.

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಎರಡನೇ ಬಾರಿಗೆ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕರಾದ ಬೆನ್ನಲ್ಲೇ ಚೀನಾದ ಮಹತ್ವಾಕಾಂಕ್ಷಿ ಯೋಜನೆ ಒನ್ ಬೆಲ್ಟ್ ಒನ್ ರೋಡ್ ಗೆ ಭಾರತ ಷರತ್ತುಬದ್ಧ  ಬೆಂಬಲ ನೀಡಲು ಸಿದ್ಧವಾಗಿದೆ.
ಪಾಕಿಸ್ತಾನವನ್ನೂ ಒಳಗೊಂಡಿರುವ ಚೀನಾದ ಒಬೋರ್ ಯೋಜನೆ ನ್ಯಾಯಸಮ್ಮತವಾಗಿದ್ದರೆ ಮಾತ್ರ ಭಾರತ ಅದಕ್ಕೆ ಬೆಂಬಲ ನೀಡುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆಯ  ವಕ್ತಾರ ರವೀಶ್ ಕುಮಾರ್ ಅವರು, ಚೀನಾದ ಒಬೋರ್ ಯೋಜನೆಗೆ ಸಂಬಂಧಿಸಿದಂತೆ ಭಾರತ ಈಗಲೂ ತನ್ನ ನಿಲುವಿಗೆ ಬದ್ಧವಾಗಿದೆ. ಒಬೋರ್ ಯೋಜನೆ ನ್ಯಾಯಸಮ್ಮತ ಮತ್ತು ಪ್ರತಿಯೊಬ್ಬರಿಗೂ ಸಮಾನವಾಗಿದ್ದರೆ ಮಾತ್ರ  ಭಾರತ ಅದಕ್ಕೆ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.
ಅಂತೆಯೇ ವಿವಾದಿತ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಯೋಜನೆ ಹಾದು ಹೋಗಿರುವುದರ ವಿರುದ್ಧದ ತನ್ನ ವಿರೋಧವನ್ನು ಭಾರತ ಮುಂದುವರೆಸಿದೆ.
ಇನ್ನು 2ನೇ ಬಾರಿಗೆ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಕ್ಸಿ ಜಿನ್ ಪಿಂಗ್ ಅವರ ಕುರಿತಂತೆ ಮಾತನಾಡಿದ ರವೀಶ್ ಕುಮಾರ್ ಅವರು, ಕ್ಸಿ ಜಿನ್ ಪಿಂಗ್ ಅವರಿಗೆ ಈಗಾಗಲೇ ಪ್ರಧಾನಿ ಮೋದಿ  ಶುಭಾಶಯ ಕೋರಿದ್ದಾರೆ. ಅಂತೆಯೇ ಕ್ಸಿ ಜಿನ್ ಪಿಂಗ್ ನೇತೃತ್ವದಲ್ಲಿ ಭಾರತ ಮತ್ತು ಚೀನಾ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ. ಅಂತೆಯೇ ಭಾರತಕ್ಕೆ ಸಂಬಂಧಿಸಿದಂತೆ ಚೀನಾ ಕಾಂಗ್ರೆಸ್ ನ  ನೀತಿಗಳು ದ್ವಿಪಕ್ಷೀಯ ಸಂಬಂಧ ಸುಧಾರಣೆಗೆ ನೆರವಾಗುವ ವಿಶ್ವಾಸವಿದೆ ಎಂದು ರವೀಶ್ ಕುಮಾರ್ ಹೇಳಿದ್ದಾರೆ.
ಭಾರತದ ನಿಲುವು ಸ್ಪಾಗತಿಸಿದ ಚೀನಾ
ಇದೇ ವೇಳೆ ಒಬೋರ್ ಗೆ ಪರೋಕ್ಷ ಒಪ್ಪಿಗೆ ನೀಡಿರುವ ಭಾರತದ ನಿಲುವನ್ನು ಚೀನಾ ಸ್ವಾಗತಿಸಿದ್ದು, ಚೀನಾದ ಬಹು ಉದ್ದೇಶಿತ ಯೋಜನೆಯಲ್ಲಿ ಭಾರತದ ಪಾಲ್ಗೊಳ್ಳುವಿಕೆ ಹೊಸ ಉತ್ತೇಜನ ನೀಡಲಿದೆ ಎಂದು ಹೇಳಿದೆ. ಈ ಬಗ್ಗೆ  ಮಾತನಾಡಿರುವ ಚೀನಾದ ವಿದೇಶಾಂಗ ಇಲಾಖೆ ವಕ್ತಾರ ಗೆಂಗ್ ಶಾಂಗ್ ಅವರು, ಸ್ವಯಂ ಪ್ರೇರಿತವಾಗಿ ಭಾರತ ಚೀನಾದ ಒಬೋರ್ ಯೋಜನೆಯಲ್ಲಿ ಪಾಲ್ಗೊಳ್ಳುತ್ತಿರುವು ಸ್ವಾಗತಾರ್ಹ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT