ಸಾಂದರ್ಭಿಕ ಚಿತ್ರ 
ದೇಶ

ಸಿರಿಯಾದಲ್ಲಿ ಇಸಿಸ್ ಸೇರಲು ಹೋಗಿದ್ದ ಕಣ್ಣೂರಿನ ಐವರ ಹತ್ಯೆ: ಪೊಲೀಸರು

ಕಣ್ಣೂರಿನಿಂದ ಸಿರಿಯಾಕ್ಕೆ ಹೋಗಿದ್ದ ತಮ್ಮ ಸಿದ್ಧಾಂತಗಳನ್ನು ಅನುಸರಿಸದಿದ್ದ ಐವರನ್ನು ಕೊಂದುಹಾಕಿದ್ದಾರೆ ಎಂದು ಪೊಲೀಸರು ....

ಕಣ್ಣೂರು: ಸಿರಿಯಾಕ್ಕೆ ಕಣ್ಣೂರಿನಿಂದ ಹೋಗಿದ್ದ ತಮ್ಮ ಸಿದ್ಧಾಂತಗಳನ್ನು ಅನುಸರಿಸದಿದ್ದ ಐವರನ್ನು ಕೊಂದುಹಾಕಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರು ಮಾಧ್ಯಮಗಳಿಗೆ ಸುದ್ದಿ ಪುಷ್ಟೀಕರಿಸಲು ಪೋಟೋಗಳನ್ನು ಕೂಡ ಬಿಡುಗಡೆ ಮಾಡಿದ್ದಾರೆ.
ಕಣ್ಣೂರಿನ ಶಹನಾದ್, ಮೂಪ್ಪನ್ಪರಾದ ರಿಶಾಲ್, ವಲಪಟ್ಟನಮ್, ಶಮೀರ್, ಸನ್ಮಾನ್ ಮತ್ತು ಮುಹಮ್ಮದ್ ಶಾಜಿಲ್ ಸಿರಿಯಾಕ್ಕೆ ಹೋಗಿ ಯುದ್ಧದಲ್ಲಿ ಮೃತಪಟ್ಟವರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕೇರಳದ ಕಣ್ಣೂರಿನಿಂದ ಸಿರಿಯಾದ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆ ಸೇರಲು ಇದುವರೆಗೆ 15 ಮಂದಿ ತೆರಳಿದ್ದರು. ಅವರ ಚಲನವಲನಗಳನ್ನು ಸಂಘಟನೆ ಮುಖ್ಯಸ್ಥರು ಕಳೆದ 6 ತಿಂಗಳುಗಳ ಕಾಲ ಗಮನಿಸುತ್ತಿದ್ದರು. ಕಳೆದ ಎರಡು ದಿನಗಳಲ್ಲಿ ಐವರನ್ನು ಕೊಂದುಹಾಕಿದ್ದು ಇನ್ನು ಐವರನ್ನು ಅಪಹರಿಸಲಾಗಿದೆ.
ಈ ಐವರ ಬಂಧನದಿಂದ ಕೇರಳದಲ್ಲಿ ಇಸ್ಲಾಮಿಕ್ ಸ್ಟೇಟ್ ನ ಸಂಪರ್ಕ ಮತ್ತು ಕಾರ್ಯಾಚರಣೆ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ಸಿಗುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದ್ದಾರೆ. ಕೇಸಿಗೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಲು ಪೊಲೀಸ್ ಸೂಪರಿಂಟೆಂಡೆಂಟ್ ಜಿ.ಶಿವ ವಿಕ್ರಮ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT