ಸಾಂದರ್ಭಿಕ ಚಿತ್ರ 
ದೇಶ

ಸಿರಿಯಾದಲ್ಲಿ ಇಸಿಸ್ ಸೇರಲು ಹೋಗಿದ್ದ ಕಣ್ಣೂರಿನ ಐವರ ಹತ್ಯೆ: ಪೊಲೀಸರು

ಕಣ್ಣೂರಿನಿಂದ ಸಿರಿಯಾಕ್ಕೆ ಹೋಗಿದ್ದ ತಮ್ಮ ಸಿದ್ಧಾಂತಗಳನ್ನು ಅನುಸರಿಸದಿದ್ದ ಐವರನ್ನು ಕೊಂದುಹಾಕಿದ್ದಾರೆ ಎಂದು ಪೊಲೀಸರು ....

ಕಣ್ಣೂರು: ಸಿರಿಯಾಕ್ಕೆ ಕಣ್ಣೂರಿನಿಂದ ಹೋಗಿದ್ದ ತಮ್ಮ ಸಿದ್ಧಾಂತಗಳನ್ನು ಅನುಸರಿಸದಿದ್ದ ಐವರನ್ನು ಕೊಂದುಹಾಕಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರು ಮಾಧ್ಯಮಗಳಿಗೆ ಸುದ್ದಿ ಪುಷ್ಟೀಕರಿಸಲು ಪೋಟೋಗಳನ್ನು ಕೂಡ ಬಿಡುಗಡೆ ಮಾಡಿದ್ದಾರೆ.
ಕಣ್ಣೂರಿನ ಶಹನಾದ್, ಮೂಪ್ಪನ್ಪರಾದ ರಿಶಾಲ್, ವಲಪಟ್ಟನಮ್, ಶಮೀರ್, ಸನ್ಮಾನ್ ಮತ್ತು ಮುಹಮ್ಮದ್ ಶಾಜಿಲ್ ಸಿರಿಯಾಕ್ಕೆ ಹೋಗಿ ಯುದ್ಧದಲ್ಲಿ ಮೃತಪಟ್ಟವರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕೇರಳದ ಕಣ್ಣೂರಿನಿಂದ ಸಿರಿಯಾದ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆ ಸೇರಲು ಇದುವರೆಗೆ 15 ಮಂದಿ ತೆರಳಿದ್ದರು. ಅವರ ಚಲನವಲನಗಳನ್ನು ಸಂಘಟನೆ ಮುಖ್ಯಸ್ಥರು ಕಳೆದ 6 ತಿಂಗಳುಗಳ ಕಾಲ ಗಮನಿಸುತ್ತಿದ್ದರು. ಕಳೆದ ಎರಡು ದಿನಗಳಲ್ಲಿ ಐವರನ್ನು ಕೊಂದುಹಾಕಿದ್ದು ಇನ್ನು ಐವರನ್ನು ಅಪಹರಿಸಲಾಗಿದೆ.
ಈ ಐವರ ಬಂಧನದಿಂದ ಕೇರಳದಲ್ಲಿ ಇಸ್ಲಾಮಿಕ್ ಸ್ಟೇಟ್ ನ ಸಂಪರ್ಕ ಮತ್ತು ಕಾರ್ಯಾಚರಣೆ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ಸಿಗುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದ್ದಾರೆ. ಕೇಸಿಗೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಲು ಪೊಲೀಸ್ ಸೂಪರಿಂಟೆಂಡೆಂಟ್ ಜಿ.ಶಿವ ವಿಕ್ರಮ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT